ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ತೂರಾಟ ಖಂಡಿಸಿ ಬಸ್‌ ಸಂಚಾರ ಸ್ಥಗಿತ

Last Updated 7 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಕಾಸರಗೋಡು: ಬಾಬರಿ ಮಸೀದಿ ಧ್ವಂಸದ ಕರಾಳ ದಿನ ಆಚರಣೆ ವೇಳೆ ಕಾಸರಗೋಡು ಮತ್ತು ಮಂಜೇಶ್ವರ ತಾಲ್ಲೂಕುಗಳಲ್ಲಿ ಕಿಡಿಗೇಡಿಗಳು ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ.

ಇದನ್ನು ಖಂಡಿಸಿ ಗುರುವಾರ ಕಾಸರಗೋಡು- ತಲಪಾಡಿ ಹೆದ್ದಾರಿ ಹಾಗೂ ಕುಂಬಳೆ -ಬದಿಯಡ್ಕ -ಮುಳ್ಳೇರಿಯ ಮಾರ್ಗದಲ್ಲಿ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಯಿತು.

ಕಲ್ಲು ತೂರಾಟದಿಂದ ಬಸ್‌ ಚಾಲಕ ಹೃತೇಶ್ ಎಂಬವರ ಕಣ್ಣಿಗೆ ತೀವ್ರ ಗಾಯವಾಗಿದೆ. ಈ ಸಂಬಂಧ ಕೂಡ್ಲುವಿನ ಇಂಜಮಾಮ್, ಮುಹಮ್ಮದ್ ಅಜ್ಮಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT