ಜನಸಂಗ್ರಾಮ ಪರಿಷತ್ನ ಎಂ.ಸಿ.ಚಿಕ್ಕಣ್ಣ ಅವರು 2008ರಲ್ಲಿ ಸೋಮಶೇಖರ್ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಸೋಮಶೇಖರ್ ಪತ್ರಿಕಾಗೋಷ್ಠಿ ನಡೆಸಿ ಚಿಕ್ಕಣ್ಣ ವಿರುದ್ಧ ಹೇಳಿಕೆ ನೀಡಿದ್ದರು. ಈ ಹೇಳಿಕೆಗಳ ವಿರುದ್ಧ ಚಿಕ್ಕಣ್ಣ ಮಾನಹಾನಿ ಪ್ರಕರಣವನ್ನು 2009ರಲ್ಲಿ ದಾಖಲಿಸಿದ್ದರು.