ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆಯ ತ್ಯಾವಣಿಗೆಯಲ್ಲಿ ಆನೆ ದಾಳಿ

Last Updated 8 ಡಿಸೆಂಬರ್ 2017, 5:54 IST
ಅಕ್ಷರ ಗಾತ್ರ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ತ್ಯಾವಣಿಗೆಯಲ್ಲಿ ಆನೆ ದಾಳಿಯಿಂದ ಗಣೇಶ್ (42) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಣೇಶ್‌ ಸಂಬಂಧಿ ಜಗದೀಶ್ ಎಂಬುರವ ಜತೆ ಹುಲ್ಲು ಕೊಯ್ಯಲು ಹೊಲಕ್ಕೆ ಹೋಗಿದ್ದಾಗ ಆನೆ ಏಕಾಏಕಿ ದಾಳಿ ಮಾಡಿದೆ. ಗಣೇಶ್ ಅವರ ಹೊಟ್ಟೆಗೆ ಆನೆ ದಂತದಿಂದ ತಿವಿದಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆ ದಾಳಿಯಿಂದ ಅಶೋಕ್ ಎಂಬುವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಎರಡು ಆನೆಗಳು ಸೂಳೆಕೆರೆ ಅರಣ್ಯದಲ್ಲಿ ಬೀಡುಬಿಟ್ಟಿವೆ. ಆನೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಭೀತಿಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT