<p><strong>ಬೆಂಗಳೂರು: </strong>ಎಂಜಿನಿಯರಿಂಗ್ ಪದವಿ ಪ್ರವೇಶ ಕುರಿತಂತೆ ನೀಡಲಾಗಿದ್ದ ಹೈಕೋರ್ಟ್ ಆದೇಶವನ್ನೇ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.</p>.<p>ಆದೇಶ ತಿರುಚಲಾಗಿದೆ ಎಂದು ಆರೋಪಿಸಿ ನಗರದ ಚೇರುಕುರಿ ವೀರ ಅಜಯ್ ಸೇರಿದಂತೆ 13 ಜನ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ಪ್ರಕರಣದ ಬಗ್ಗೆ ಆತಂಕ ವ್ಯಕ್ತಪಡಿಸಿದ ನ್ಯಾಯಪೀಠ, ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.</p>.<p><strong>ಪ್ರಕರಣವೇನು?: </strong>ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 5 ಹಾಗೂ 7ನೇ ಸೆಮಿಸ್ಟರ್ ಪ್ರವೇಶಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ‘ಒನ್ ಟೈಮ್ ಎಕ್ಸಿಟ್ ಸ್ಕೀಮ್’ ಯೋಜನೆ ಪರಿಚಯಿಸಿತ್ತು. ಈ ಯೋಜನೆಯಡಿ ಸಲ್ಲಿಸಲಾದ ಅರ್ಜಿಗಳನ್ನು ಕೆಲ ಕಾಲೇಜುಗಳು ತಿರಸ್ಕರಿಸಿದ್ದವು.ಇದನ್ನು ವಿದ್ಯಾರ್ಥಿಗಳು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<p>ಇದನ್ನು 2017ರ ಸೆ.28ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ‘ವಿದ್ಯಾರ್ಥಿಗಳ ಪ್ರವೇಶ ಅರ್ಜಿಗಳನ್ನು ಪರಿಗಣಿಸಿ’ ಎಂದು ಆಯಾ ಕಾಲೇಜುಗಳಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಹೊರಡಿಸಿತ್ತು. ಈ ಆದೇಶವನ್ನೇ ಇಟ್ಟುಕೊಂಡು ಹೈಕೋರ್ಟ್ ಮೆಟ್ಟಿಲು ಏರದ ಅನ್ಯ ವಿದ್ಯಾರ್ಥಿಗಳು, ‘ನಾವೂ ಈ ಆದೇಶದ ಫಲಾನುಭವಿಗಳು ಎಂಬಂತೆ ಬಿಂಬಿಸಿಕೊಂಡು ಆದೇಶ ಸೃಷ್ಟಿಸಿಕೊಂಡಿದ್ದರು. ಇದು ದೃಢೀಕೃತ ಆದೇಶ ಎಂಬಂತೆ ಅಧಿಕೃತ ಮೊಹರನ್ನೂ ಹಾಕಿ ಪ್ರಯೋಜನ ಪಡೆದಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.</p>.<p>‘ತಿರುಚಲಾದ ಆದೇಶವನ್ನು 2017ರ ಅಕ್ಟೋಬರ್ 29ರಂದು ಹೊರಡಿಸಲಾಗಿದೆ ಎಂದು ತೋರಿಸಲಾಗಿದೆ. ಆದರೆ ಅಂದು ಶನಿವಾರವಾಗಿದ್ದು ಹೈಕೋರ್ಟ್ ಕಲಾಪವೇ ನಡೆದಿರಲಿಲ್ಲ’ ಎಂಬುದು ಅರ್ಜಿದಾರರ ಮತ್ತೊಂದು ವಾದಾಂಶ.</p>.<p>ಆದೇಶ ಪಡೆದಿದ್ದ ಮೂಲ ಅರ್ಜಿದಾರ ವಿದ್ಯಾರ್ಥಿಗಳು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಈ ಕುರಿತಂತೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಎಂಜಿನಿಯರಿಂಗ್ ಪದವಿ ಪ್ರವೇಶ ಕುರಿತಂತೆ ನೀಡಲಾಗಿದ್ದ ಹೈಕೋರ್ಟ್ ಆದೇಶವನ್ನೇ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.</p>.<p>ಆದೇಶ ತಿರುಚಲಾಗಿದೆ ಎಂದು ಆರೋಪಿಸಿ ನಗರದ ಚೇರುಕುರಿ ವೀರ ಅಜಯ್ ಸೇರಿದಂತೆ 13 ಜನ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ಪ್ರಕರಣದ ಬಗ್ಗೆ ಆತಂಕ ವ್ಯಕ್ತಪಡಿಸಿದ ನ್ಯಾಯಪೀಠ, ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.</p>.<p><strong>ಪ್ರಕರಣವೇನು?: </strong>ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 5 ಹಾಗೂ 7ನೇ ಸೆಮಿಸ್ಟರ್ ಪ್ರವೇಶಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ‘ಒನ್ ಟೈಮ್ ಎಕ್ಸಿಟ್ ಸ್ಕೀಮ್’ ಯೋಜನೆ ಪರಿಚಯಿಸಿತ್ತು. ಈ ಯೋಜನೆಯಡಿ ಸಲ್ಲಿಸಲಾದ ಅರ್ಜಿಗಳನ್ನು ಕೆಲ ಕಾಲೇಜುಗಳು ತಿರಸ್ಕರಿಸಿದ್ದವು.ಇದನ್ನು ವಿದ್ಯಾರ್ಥಿಗಳು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<p>ಇದನ್ನು 2017ರ ಸೆ.28ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ‘ವಿದ್ಯಾರ್ಥಿಗಳ ಪ್ರವೇಶ ಅರ್ಜಿಗಳನ್ನು ಪರಿಗಣಿಸಿ’ ಎಂದು ಆಯಾ ಕಾಲೇಜುಗಳಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಹೊರಡಿಸಿತ್ತು. ಈ ಆದೇಶವನ್ನೇ ಇಟ್ಟುಕೊಂಡು ಹೈಕೋರ್ಟ್ ಮೆಟ್ಟಿಲು ಏರದ ಅನ್ಯ ವಿದ್ಯಾರ್ಥಿಗಳು, ‘ನಾವೂ ಈ ಆದೇಶದ ಫಲಾನುಭವಿಗಳು ಎಂಬಂತೆ ಬಿಂಬಿಸಿಕೊಂಡು ಆದೇಶ ಸೃಷ್ಟಿಸಿಕೊಂಡಿದ್ದರು. ಇದು ದೃಢೀಕೃತ ಆದೇಶ ಎಂಬಂತೆ ಅಧಿಕೃತ ಮೊಹರನ್ನೂ ಹಾಕಿ ಪ್ರಯೋಜನ ಪಡೆದಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.</p>.<p>‘ತಿರುಚಲಾದ ಆದೇಶವನ್ನು 2017ರ ಅಕ್ಟೋಬರ್ 29ರಂದು ಹೊರಡಿಸಲಾಗಿದೆ ಎಂದು ತೋರಿಸಲಾಗಿದೆ. ಆದರೆ ಅಂದು ಶನಿವಾರವಾಗಿದ್ದು ಹೈಕೋರ್ಟ್ ಕಲಾಪವೇ ನಡೆದಿರಲಿಲ್ಲ’ ಎಂಬುದು ಅರ್ಜಿದಾರರ ಮತ್ತೊಂದು ವಾದಾಂಶ.</p>.<p>ಆದೇಶ ಪಡೆದಿದ್ದ ಮೂಲ ಅರ್ಜಿದಾರ ವಿದ್ಯಾರ್ಥಿಗಳು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಈ ಕುರಿತಂತೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>