<p><strong>ನವದೆಹಲಿ</strong>: ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರ ರೈತ ವಿರೋಧಿ ಧೋರಣೆಯನ್ನು ಹೊಂದಿದೆ ಎಂದು ಖಂಡಿಸಿ ಮಹಾರಾಷ್ಟ್ರದ ಬಿಜೆಪಿ ಸಂಸದ ನಾನಾ ಪೆಟೋಲ್ ಶುಕ್ರವಾರ ಸಂಸದ ಸ್ಥಾನ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.</p>.<p>ಕೇಸರಿ ಪಾಳಯ ತೊರೆದಿರುವ ನಾನಾ, ಕಾಂಗ್ರೆಸ್ ಸೇರಿ ರಾಹುಲ್ ಗಾಂಧಿಯವರೊಂದಿಗೆ ಇದೇ 11ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಜಾಥಾದಲ್ಲಿ ಭಾಗವಹಿಸಲಿದ್ದಾರೆ.</p>.<p>2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸೇರಿದ್ದ ನಾನಾ ಭಂಡಾರಾ-ಗೊಂಡಿಯಾ ಕ್ಷೇತ್ರದಿಂದ ಸ್ಪರ್ಧಿಸಿ ಎನ್ಸಿಪಿಯ ಪ್ರಫುಲ್ ಪಟೇಲ್ ಅವರನ್ನು ಸೋಲಿಸಿದ್ದರು. ಬಿಜೆಪಿ ಸೇರುವುದಕ್ಕೂ ಮೊದಲು ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳಲ್ಲಿ ಪೆಟೋಲ್ ಇದ್ದರು.</p>.<p>ರೈತರ ಸಮಸ್ಯೆ ಸೇರಿದಂತೆ ಹಲವಾರು ವಿವಾದಿತ ವಿಚಾರಗಳ ಬಗ್ಗೆ ಮಹಾರಾಷ್ಟ್ರ ಸರ್ಕಾರದ ನಿಲುವನ್ನು ಪೆಟೋಲ್ ಪ್ರಶ್ನಿಸುತ್ತಿದ್ದರು.</p>.<p>ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ನೀಡಿರುವ ರಾಜೀನಾಮೆ ಪತ್ರದಲ್ಲಿ ರೈತ ಸಮಸ್ಯೆ, ಆರ್ಥಿಕ ಸ್ವರೂಪ, ನಿರುದ್ಯೋಗ ಒಟ್ಟಾರೆ 14 ವಿಷಯಗಳನ್ನು ಪ್ರಸ್ತಾಪಿಸಿರುವ ನಾನಾ, ಈ ಎಲ್ಲಾ ಕಾರಣದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಮಹಾರಾಷ್ಟ್ರ ಸರ್ಕಾರದ ನಡವಳಿಕೆ ಹಾಗೂ ಈ ಎಲ್ಲಾ ವಿಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ತಂದಿದ್ದೆ, ಆದರೆ ಅವರೂ ಏನು ಮಾಡದೆ ನಿರ್ಲಕ್ಷಿಸಿದ್ದಾರೆ’ ಎಂದು ನಾನಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರ ರೈತ ವಿರೋಧಿ ಧೋರಣೆಯನ್ನು ಹೊಂದಿದೆ ಎಂದು ಖಂಡಿಸಿ ಮಹಾರಾಷ್ಟ್ರದ ಬಿಜೆಪಿ ಸಂಸದ ನಾನಾ ಪೆಟೋಲ್ ಶುಕ್ರವಾರ ಸಂಸದ ಸ್ಥಾನ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.</p>.<p>ಕೇಸರಿ ಪಾಳಯ ತೊರೆದಿರುವ ನಾನಾ, ಕಾಂಗ್ರೆಸ್ ಸೇರಿ ರಾಹುಲ್ ಗಾಂಧಿಯವರೊಂದಿಗೆ ಇದೇ 11ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಜಾಥಾದಲ್ಲಿ ಭಾಗವಹಿಸಲಿದ್ದಾರೆ.</p>.<p>2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸೇರಿದ್ದ ನಾನಾ ಭಂಡಾರಾ-ಗೊಂಡಿಯಾ ಕ್ಷೇತ್ರದಿಂದ ಸ್ಪರ್ಧಿಸಿ ಎನ್ಸಿಪಿಯ ಪ್ರಫುಲ್ ಪಟೇಲ್ ಅವರನ್ನು ಸೋಲಿಸಿದ್ದರು. ಬಿಜೆಪಿ ಸೇರುವುದಕ್ಕೂ ಮೊದಲು ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳಲ್ಲಿ ಪೆಟೋಲ್ ಇದ್ದರು.</p>.<p>ರೈತರ ಸಮಸ್ಯೆ ಸೇರಿದಂತೆ ಹಲವಾರು ವಿವಾದಿತ ವಿಚಾರಗಳ ಬಗ್ಗೆ ಮಹಾರಾಷ್ಟ್ರ ಸರ್ಕಾರದ ನಿಲುವನ್ನು ಪೆಟೋಲ್ ಪ್ರಶ್ನಿಸುತ್ತಿದ್ದರು.</p>.<p>ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ನೀಡಿರುವ ರಾಜೀನಾಮೆ ಪತ್ರದಲ್ಲಿ ರೈತ ಸಮಸ್ಯೆ, ಆರ್ಥಿಕ ಸ್ವರೂಪ, ನಿರುದ್ಯೋಗ ಒಟ್ಟಾರೆ 14 ವಿಷಯಗಳನ್ನು ಪ್ರಸ್ತಾಪಿಸಿರುವ ನಾನಾ, ಈ ಎಲ್ಲಾ ಕಾರಣದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಮಹಾರಾಷ್ಟ್ರ ಸರ್ಕಾರದ ನಡವಳಿಕೆ ಹಾಗೂ ಈ ಎಲ್ಲಾ ವಿಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ತಂದಿದ್ದೆ, ಆದರೆ ಅವರೂ ಏನು ಮಾಡದೆ ನಿರ್ಲಕ್ಷಿಸಿದ್ದಾರೆ’ ಎಂದು ನಾನಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>