<p><strong>ಮೈಸೂರು</strong>: ‘ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರದು ಆಚಾರವಿಲ್ಲದ ನಾಲಗೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಶುಕ್ರವಾರ ಟೀಕಿಸಿದರು.</p>.<p>‘ಸಿದ್ದರಾಮಯ್ಯ ಪಾಪದ ಪಿಂಡ’ ಎಂಬ ಹೆಗಡೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರ ನಾಲಗೆ ಸಂಸ್ಕೃತಿಯನ್ನು ಹೇಳುತ್ತದೆ. ಪುರಂದರದಾಸರು ‘ಆಚಾರವಿಲ್ಲದ ನಾಲಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಗೆ’ ಎಂದಿದ್ದಾರೆ. ಅದು ಇವರಿಗೆ ಅನ್ವಯಿಸುತ್ತದೆ ಎಂದು ಚಾಟಿ ಬೀಸಿದರು.</p>.<p>‘ಬಿಜೆಪಿಯವರು ತಮಗೆ ಸಂಸ್ಕೃತಿ, ಸಂಸ್ಕಾರ ಇದೆ ಎಂದು ಹೇಳುವುದು ಇದೇ ಏನು? ನಾನು ಹಳ್ಳಿಯಿಂದ ಬಂದವನು. ನನಗೆ ಹೆಗಡೆಗಿಂತಲೂ ಕೆಟ್ಟದಾಗಿ ಬಯ್ಯಲು ಬರುತ್ತದೆ. ಆದರೆ, ಆ ರೀತಿಯ ಭಾಷೆ ಬಳಸಬಾರದು. ಮಣಿಶಂಕರ್ ಅಯ್ಯರ್ ಅವರು ಪ್ರಧಾನಿಗೆ ‘ನೀಚ’ ಎಂಬ ಪದ ಬಳಸಿದ ಕಾರಣಕ್ಕೆ, ಅವರನ್ನು ಪಕ್ಷದಿಂದ ತೆಗೆದುಹಾಕಲಾಗಿದೆ. ಇದನ್ನು ಬಿಜೆಪಿಯಿಂದ ನಿರೀಕ್ಷೆ ಮಾಡಲು ಸಾಧ್ಯವೇ? ಕೋಮುವಾದಿಗಳಿಂದ ನಾವು ಏನನ್ನೂ ನಿರೀಕ್ಷಿಸುವುದಿಲ್ಲ’ ಎಂದರು.</p>.<p>ಸ್ವೇಚ್ಛಾಚಾರ ಬಿಡಲಿ: ಸಂಸದ ಪ್ರತಾಪ ಸಿಂಹ ಅವರು ಸ್ವೇಚ್ಛಾಚಾರವನ್ನು ಬಿಡಬೇಕು. ಈ ನಾಡಿನ ಕಾನೂನಿಗೆ ಗೌರವ ಕೊಡಬೇಕು. ಕಾನೂನು ರಚಿಸುವವರೇ ಕಾನೂನು ಉಲ್ಲಂಘಿಸಿದರೆ ಹೇಗೆ? ಸರ್ಕಾರಿ ಕಾರನ್ನು ಚಾಲನೆ ಮಾಡಿ ಪೊಲೀಸ್ ಬ್ಯಾರಿಕೇಡ್ಗೆ ಗುದ್ದುವುದನ್ನು ಒಪ್ಪಿಕೊಳ್ಳಬೇಕೆ? ಸಂಸದನಾದ ಕೂಡಲೇ ಕಾನೂನು ಮುರಿಯಲು ಸಾಧ್ಯವೆ ಎಂದು<br /> ಅವರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರದು ಆಚಾರವಿಲ್ಲದ ನಾಲಗೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಶುಕ್ರವಾರ ಟೀಕಿಸಿದರು.</p>.<p>‘ಸಿದ್ದರಾಮಯ್ಯ ಪಾಪದ ಪಿಂಡ’ ಎಂಬ ಹೆಗಡೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರ ನಾಲಗೆ ಸಂಸ್ಕೃತಿಯನ್ನು ಹೇಳುತ್ತದೆ. ಪುರಂದರದಾಸರು ‘ಆಚಾರವಿಲ್ಲದ ನಾಲಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಗೆ’ ಎಂದಿದ್ದಾರೆ. ಅದು ಇವರಿಗೆ ಅನ್ವಯಿಸುತ್ತದೆ ಎಂದು ಚಾಟಿ ಬೀಸಿದರು.</p>.<p>‘ಬಿಜೆಪಿಯವರು ತಮಗೆ ಸಂಸ್ಕೃತಿ, ಸಂಸ್ಕಾರ ಇದೆ ಎಂದು ಹೇಳುವುದು ಇದೇ ಏನು? ನಾನು ಹಳ್ಳಿಯಿಂದ ಬಂದವನು. ನನಗೆ ಹೆಗಡೆಗಿಂತಲೂ ಕೆಟ್ಟದಾಗಿ ಬಯ್ಯಲು ಬರುತ್ತದೆ. ಆದರೆ, ಆ ರೀತಿಯ ಭಾಷೆ ಬಳಸಬಾರದು. ಮಣಿಶಂಕರ್ ಅಯ್ಯರ್ ಅವರು ಪ್ರಧಾನಿಗೆ ‘ನೀಚ’ ಎಂಬ ಪದ ಬಳಸಿದ ಕಾರಣಕ್ಕೆ, ಅವರನ್ನು ಪಕ್ಷದಿಂದ ತೆಗೆದುಹಾಕಲಾಗಿದೆ. ಇದನ್ನು ಬಿಜೆಪಿಯಿಂದ ನಿರೀಕ್ಷೆ ಮಾಡಲು ಸಾಧ್ಯವೇ? ಕೋಮುವಾದಿಗಳಿಂದ ನಾವು ಏನನ್ನೂ ನಿರೀಕ್ಷಿಸುವುದಿಲ್ಲ’ ಎಂದರು.</p>.<p>ಸ್ವೇಚ್ಛಾಚಾರ ಬಿಡಲಿ: ಸಂಸದ ಪ್ರತಾಪ ಸಿಂಹ ಅವರು ಸ್ವೇಚ್ಛಾಚಾರವನ್ನು ಬಿಡಬೇಕು. ಈ ನಾಡಿನ ಕಾನೂನಿಗೆ ಗೌರವ ಕೊಡಬೇಕು. ಕಾನೂನು ರಚಿಸುವವರೇ ಕಾನೂನು ಉಲ್ಲಂಘಿಸಿದರೆ ಹೇಗೆ? ಸರ್ಕಾರಿ ಕಾರನ್ನು ಚಾಲನೆ ಮಾಡಿ ಪೊಲೀಸ್ ಬ್ಯಾರಿಕೇಡ್ಗೆ ಗುದ್ದುವುದನ್ನು ಒಪ್ಪಿಕೊಳ್ಳಬೇಕೆ? ಸಂಸದನಾದ ಕೂಡಲೇ ಕಾನೂನು ಮುರಿಯಲು ಸಾಧ್ಯವೆ ಎಂದು<br /> ಅವರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>