<p><strong>ಬೆಂಗಳೂರು</strong>: ಹುಸ್ಕೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ದಾನಿಗಳ ಸಹಾಯದಿಂದ ₹4 ಲಕ್ಷ ವೆಚ್ಚದಲ್ಲಿ ಎಂಟು ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ.</p>.<p>‘ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಇದ್ದಿದ್ದರಿಂದ ಸರ್ಕಾರದ ಅನುದಾಯಕ್ಕಾಗಿ ಕಾಯದೆ ದಾನಿಗಳಿಂದ ಹಣ ಸಂಗ್ರಹಿಸಿ ಜನರಿಗೆ ನೀರು ಸಿಗುವಂತೆ ಮಾಡಿದ್ದೇವೆ’ ಎಂದು ಹುಸ್ಕೂರು ಗ್ರಾಮ ಪಂಚಾಯತಿ ಅಧ್ಯಕ್ಷ ಜಿ. ಸೋಮಶೇಖರ್ ಹೇಳಿದರು.</p>.<p>ಹೆಸರಘಟ್ಟ ಸಮೀಪದ ತೊರೆನಾಗಚಂದ್ರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಮತ್ತು ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ತೊರೆನಾಗ ಚಂದ್ರದಲ್ಲಿ ಒಳ ಚರಂಡಿ ವ್ಯವಸ್ಥೆ ಇರಲಿಲ್ಲ. ಮಳೆಗಾಲದಲ್ಲಿ ಕೊಳಚೆ ನೀರು ಮನೆಗಳಿಗೆ ಹರಿದು ಬರುತ್ತಿತ್ತು. ಹಾಗಾಗಿ ₹10 ಲಕ್ಷ ವೆಚ್ಚದಲ್ಲಿ ಒಳ ಚರಂಡಿ ಕಾಮಗಾರಿ ಆರಂಭಿಸಿದ್ದೇವೆ’ ಎಂದರು.</p>.<p>ರಾಮಜೀಪಾಳ್ಯದ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ₹6 ಲಕ್ಷ, ಸಂಸದ ವೀರಪ್ಪ ಮೊಯ್ಲಿ ಅನುದಾನದಿಂದ ₹8 ಲಕ್ಷಗಳಲ್ಲಿ ಅರಳೀ<br /> ಕಟ್ಟೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಎಲ್ಲ ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹುಸ್ಕೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ದಾನಿಗಳ ಸಹಾಯದಿಂದ ₹4 ಲಕ್ಷ ವೆಚ್ಚದಲ್ಲಿ ಎಂಟು ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ.</p>.<p>‘ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಇದ್ದಿದ್ದರಿಂದ ಸರ್ಕಾರದ ಅನುದಾಯಕ್ಕಾಗಿ ಕಾಯದೆ ದಾನಿಗಳಿಂದ ಹಣ ಸಂಗ್ರಹಿಸಿ ಜನರಿಗೆ ನೀರು ಸಿಗುವಂತೆ ಮಾಡಿದ್ದೇವೆ’ ಎಂದು ಹುಸ್ಕೂರು ಗ್ರಾಮ ಪಂಚಾಯತಿ ಅಧ್ಯಕ್ಷ ಜಿ. ಸೋಮಶೇಖರ್ ಹೇಳಿದರು.</p>.<p>ಹೆಸರಘಟ್ಟ ಸಮೀಪದ ತೊರೆನಾಗಚಂದ್ರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಮತ್ತು ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ತೊರೆನಾಗ ಚಂದ್ರದಲ್ಲಿ ಒಳ ಚರಂಡಿ ವ್ಯವಸ್ಥೆ ಇರಲಿಲ್ಲ. ಮಳೆಗಾಲದಲ್ಲಿ ಕೊಳಚೆ ನೀರು ಮನೆಗಳಿಗೆ ಹರಿದು ಬರುತ್ತಿತ್ತು. ಹಾಗಾಗಿ ₹10 ಲಕ್ಷ ವೆಚ್ಚದಲ್ಲಿ ಒಳ ಚರಂಡಿ ಕಾಮಗಾರಿ ಆರಂಭಿಸಿದ್ದೇವೆ’ ಎಂದರು.</p>.<p>ರಾಮಜೀಪಾಳ್ಯದ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ₹6 ಲಕ್ಷ, ಸಂಸದ ವೀರಪ್ಪ ಮೊಯ್ಲಿ ಅನುದಾನದಿಂದ ₹8 ಲಕ್ಷಗಳಲ್ಲಿ ಅರಳೀ<br /> ಕಟ್ಟೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಎಲ್ಲ ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>