ಜಾಧವ್, ಭಾರತದ ಗುಪ್ತಚರ ಸಂಸ್ಥೆ ‘ರಾ’ ಪರವಾಗಿ ಬೇಹುಗಾರಿಕಾ ಕೆಲಸಗಳಲ್ಲಿ ತೊಡಗಿದ್ದರು ಹಾಗೂ ಪಾಕಿಸ್ತಾನದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂದು ಆರೋಪಿಸಿ ಪಾಕಿಸ್ತಾನ ಸೇನಾ ನ್ಯಾಯಾಲಯ ಕಳೆದ ಏಪ್ರಿಲ್ನಲ್ಲಿ ಮರಣದಂಡನೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಭಾರತ ಅಂತರರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿದ್ದು, ಜಾಧವ್ ಅವರಿಗೆ ವಿಧಿಸಿರುವ ಶಿಕ್ಷೆ ಜಾರಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.