ಆಗ ಸ್ಥಳದಲ್ಲಿ ದಟ್ಟಣೆ ಉಂಟಾಗಿ, ಬೇರೆ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಅದನ್ನು ಗಮನಿಸಿದ ಪಿಎಸ್ಐ ಎಚ್.ಬಿ.ರಾಮಲಿಂಗಯ್ಯ ಹಾಗೂ ಸಿಬ್ಬಂದಿ, ಸ್ಥಳಕ್ಕೆ ಹೋಗಿದ್ದರು. ಈ ವೇಳೆ ಬಸ್ ಚಲಾಯಿಸಿಕೊಂಡು ಹೋಗುವಂತೆ ಚಾಲಕನಿಗೆ ಹೇಳಿದ್ದರು. ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ಬಸ್ ಚಲಾಯಿಸಿಕೊಂಡು ಹೋಗಲು ಸಾಧ್ಯವಾಗಿರಲಿಲ್ಲ. ಅನುಮಾನಗೊಂಡ ಪೊಲೀಸರು, ಆಲ್ಕೋಮೀಟರ್ನಲ್ಲಿ ತಪಾಸಣೆ ನಡೆಸಿದಾಗ ಮಧ್ಯ ಕುಡಿದಿದ್ದು ಖಾತ್ರಿಯಾಗಿದೆ.