ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧೈರ್ಯವಿದ್ದರೇ ವರುಣಾ ಕ್ಷೇತ್ರದಲ್ಲಿ ಸದಾನಂದಗೌಡರೇ ಸ್ಪರ್ಧಿಸಲಿ: ಸಿದ್ದರಾಮಯ್ಯ

Last Updated 10 ಡಿಸೆಂಬರ್ 2017, 6:44 IST
ಅಕ್ಷರ ಗಾತ್ರ

ಬೆಂಗಳೂರು: ‘ಮೈಸೂರಿನ ವರುಣಾ ಕ್ಷೇತ್ರದಲ್ಲಿ ಪಕ್ಷ ಟಿಕೆಟ್ ನೀಡಿದರೆ ನನ್ನ ಮಗ ಸ್ಪರ್ಧೆ ಮಾಡುತ್ತಾನೆ. ಧೈರ್ಯವಿದ್ದರೆ ಎದುರಾಳಿಯಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಸ್ಪರ್ಧೆ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

‘ಸದಾನಂದಗೌಡರಿಗೆ ಕ್ಷೇತ್ರದ ಉಸ್ತುವಾರಿ ನೀಡಿದ ಕೂಡಲೇ ನನಗೇಕೆ ನಡುಕ ಉಂಟಾಗುತ್ತದೆ? ‌ಕ್ಷೇತ್ರದ ಬಗ್ಗೆ ಅವರಿಗೇನು ಗೊತ್ತಿದೆ? ಕಳೆದ ಬಾರಿ 32,000 ಮತಗಳ ಅಂತರದಲ್ಲಿ ಗೆದ್ದಿದ್ದೇನೆ. ಸದಾನಂದಗೌಡರಿಗೆ ಕ್ಷೇತ್ರದ ಉಸ್ತುವಾರಿ ನೀಡಿದ ಕೂಡಲೇ ಬದಲಾವಣೆ ಆಗುತ್ತದೆಯೇ’ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು.

‘ಬಿಜೆಪಿಗೆ ಅಷ್ಟು ಅನುಕೂಲವಿದ್ದರೆ ಬೇರೆಯವರನ್ನು ನಿಲ್ಲಿಸಿ ಬಲಿಕೊಡುವ ಬದಲು ಸದಾನಂದಗೌಡರೇ ಸ್ಪರ್ಧೆ ಮಾಡಲಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT