ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಜ ಸ್ಥಿತಿಗೆ ಮರಳಿದ ಹೊನ್ನಾವರ ಪಟ್ಟಣ

Last Updated 10 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಹೊನ್ನಾವರ (ಉತ್ತರ ಕನ್ನಡ): ಹಿಂದೂ ಹಾಗೂ ಮುಸ್ಲಿಮರ ನಡುವಿನ ಗಲಭೆಯಿಂದ ತತ್ತರಿಸಿದ್ದ ಪಟ್ಟಣವು ಭಾನುವಾರ ಸಹಜ ಸ್ಥಿತಿಗೆ ಮರಳಿದೆ.

ನಾಲ್ಕೈದು ದಿನಗಳಿಂದ ಪಟ್ಟಣದಲ್ಲಿ ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಗಿತ್ತು. ಭಾನುವಾರ ಕೆಲವು ಅಂಗಡಿ, ಹೋಟೆಲ್‌ಗಳು ತೆರೆದಿದ್ದವು. ದಿನಸಿ ಹಾಗೂ ತರಕಾರಿ ಸ್ವಲ್ಪ ಮಟ್ಟಿಗೆ ಲಭ್ಯವಾಗಿದ್ದರಿಂದ ಸಾರ್ವಜನಿಕರು ಕೊಂಚ ನಿರಾಳರಾದರು.

ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಪಟ್ಟಣದ ಹೊರವಲಯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗಸ್ತು ಮುಂದುವರಿದಿದೆ. ಸೋಮವಾರದಿಂದ ಶಾಲಾ–ಕಾಲೇಜುಗಳು ಪುನರಾರಂಭವಾಗಲಿವೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್. ನಕುಲ ತಿಳಿಸಿದರು.

ಕಠಿಣ ಎಚ್ಚರಿಕೆ: ಹಿರಿಯ ನಾಗರಿಕರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ‘ತಾಲ್ಲೂಕಿನಲ್ಲಿ ಇತ್ತೀಚೆಗೆ ನಡೆದಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದ ಚಿತ್ರಗಳನ್ನು ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ನಲ್ಲಿ ಹಾಕಿ ಸುಳ್ಳು ಮಾಹಿತಿ ಹಬ್ಬಿಸಿ, ಕೋಮು ಪ್ರಚೋದನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕೇಬಲ್ ವಾಹಿನಿಗಳ ಮಾಲೀಕರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT