ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಸುದೀಪ್‌–ಮುಖ್ಯಮಂತ್ರಿ ಭೇಟಿ

Last Updated 11 ಡಿಸೆಂಬರ್ 2017, 9:34 IST
ಅಕ್ಷರ ಗಾತ್ರ

ಬೆಂಗಳೂರು: ನಟ ಸುದೀಪ್‌ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುಮಾರು 45 ನಿಮಿಷ ಚರ್ಚೆ ನಡೆಸಿ, ಅಭಿಮಾನ್‌ ಸ್ಟುಡಿಯೊ ಜಾಗವನ್ನು ಡಾ.ವಿಷ್ಣು ಪುಣ್ಯಭೂಮಿ ಎಂದು ಘೋಷಿಸುವಂತೆ ಮನವಿ ಮಾಡಿದರು.

ನಟಿ ಭಾರತಿ ಅವರ ಆಸೆಯಂತೆ ಸ್ಮಾರಕವನ್ನು ಮೈಸೂರಿನಲ್ಲಿಯೇ ನಿರ್ಮಾಣ ಮಾಡಿ. ಆದರೆ, ಅಂತ್ಯ ಸಂಸ್ಕಾರ ನಡೆದ ಅಭಿಮಾನ್ ಸ್ಟುಡಿಯೋದ ಜಾಗವನ್ನು ಡಾ.ವಿಷ್ಣು ಪುಣ್ಯಭೂಮಿ ಎಂದು ಘೋಷಿಸಿ ಅಭಿವೃದ್ಧಿಪಡಿಸುವಂತೆ ಸುದೀಪ್‌ ಮನವಿ ಮಾಡಿದರು.

ಸುದೀಪ್ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಆದ್ಯತೆ ಮೇರೆಗೆ ತಾರ್ಕಿಕ ಅಂತ್ಯ ಒದಗಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT