ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭರ್ತಿಯಾದ ಕೆರೆಗಳಿಗೆ ನೀರು ತುಂಬಿಸುವ ಸಚಿವ’

Last Updated 11 ಡಿಸೆಂಬರ್ 2017, 9:43 IST
ಅಕ್ಷರ ಗಾತ್ರ

ಯಲಬುರ್ಗಾ: ‘ಭರ್ತಿಯಾದ ಕೆರೆಗಳಿಗೆ ನೀರು ತುಂಬಿಸುವ ಹಾಗೂ ನೀರಾವರಿ ಯೋಜನೆ ಅನುಷ್ಠಾನಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಕೇವಲ ಪ್ರಚಾರದಲ್ಲಿ ತೊಡಗಿದ್ದಾರೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಲಪ್ಪ ಆಚಾರ ಆರೋಪಿಸಿದರು.

ತಾಲ್ಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ಶನಿವಾರ ಬಿಜೆಪಿ ಪರಿವರ್ತನಾ ಯಾತ್ರೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಖಾಸಗಿ ವ್ಯಕ್ತಿಗಳು ಹಾಗೂ ಗ್ರಾಮಸ್ಥರು ಸೇರಿ ಅನೇಕ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಪರಿಣಾಮ ಈಚೆಗೆ ಸುರಿದ ಮಳೆಗೆ ತಾಲ್ಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿವೆ. ತುಂಬಿದ ಕೆರೆಗಳಲ್ಲಿ ಸಚಿವರು ಹೇಗೆ ನೀರು ತುಂಬಿಸುತ್ತಾರೆ’ ಎಂದು ಪ್ರಶ್ನಿಸಿದರು.

100 ಹಾಸಿಗೆ ಆಸ್ಪತ್ರೆಗೆ ಸಿಬ್ಬಂದಿ ಹಾಗೂ ವೈದ್ಯರ ನೇಮಕದಲ್ಲಿ ಉದಾಸೀನ ತೋರಿದ್ದಾರೆ. ರೇಷ್ಮೆ ಕೃಷಿಯನ್ನು ಅಭಿವೃದ್ಧಿಗೊಳಿಸಲು ವಿಶೇಷ ಅನುದಾನ ತರದೇ ನಿರ್ಲಕ್ಷಿಸಿ ರೇಷ್ಮೆ ಇಲಾಖೆಯ ಜಮೀನನ್ನು ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ರೈಲು ಯೋಜನೆಗೆ ವಶಪಡಿಸಿಕೊಂಡ ಭೂಮಿಗೆ ಪರಿಹಾರ ಸಿಕ್ಕಿಲ್ಲ. ಭೂ ಸ್ವಾಧೀನಕ್ಕಾಗಿ ತೋರುವ ಆಸಕ್ತಿ ಪರಿಹಾರ ಕೊಡಿಸುವಲ್ಲಿ ಇರದೇ ಇರುವುದು ರೈತರ ವಿರೋಧಿ ನೀತಿಯಾಗಿದೆ’ ಎಂದು ದೂರಿದರು.

ಡಿ.19ರಂದು ಕುಕನೂರು ಪಟ್ಟಣದಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಯಲ್ಲಿ ರಾಜ್ಯಮಟ್ಟದ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ. ತಾಲ್ಲೂಕಿನ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಡಿವೆಪ್ಪ ಭಾವಿಮನಿ, ಬಿಜೆಪಿ ರತನ್ ದೇಸಾಯಿ, ಜಿಪಂ ಮಾಜಿ ಸದಸ್ಯ ಸಿ.ಹೆಚ್.ಪಾಟೀಲ, ರಸೂನಸಾಬ ದಮ್ಮೂರ ಮಾತನಾಡಿದರು.

ಜಿಪಂ ಮಾಜಿ ಸದಸ್ಯೆ ಶಕುಂತಲಾದೇವಿ ಮಾಲಿಪಾಟೀಲ, ಅಯ್ಯನಗೌಡ ಕೆಂಚಮ್ಮನವರ, ತಾ.ಪಂ ಸದಸ್ಯ ಶರಣಪ್ಪ ಈಳಗೇರ, ಗ್ರಾಪಂ ಉಪಾಧ್ಯಕ್ಷ ಭರಮಪ್ಪ ಅಗಸಿಮುಂದಿನ, ಲಿಂಬನಗೌಡ ಪಾಟೀಲ, ತಿರುಗುಣೆಪ್ಪ ಸಾಸ್ವಿಹಾಳ, ರಂಗಪ್ಪ ಕಟ್ಟಿಮನಿ, ರಾಮಣ್ಣ ನಾಯಕ, ಡಾ.ಶಂಕ್ರಪ್ಪ ರಾಂಪೂರ, ಬಸಪ್ಪ ಹಳ್ಳದ, ಈರಪ್ಪ ಕಟ್ಟಿಮನಿ, ದುರಗಪ್ಪ ಹರಿಜನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT