ಕೇಂದ್ರದ ಚುನಾವಣಾ ಪ್ರಣಾಳಿಕೆಯ ಒಪ್ಪಿಗೆ ಬಳಿಕ ರಾಜ್ಯದ ಪ್ರಣಾಳಿಕೆ: ವೀರಪ್ಪ ಮೊಯಿಲಿ

ಬೆಂಗಳೂರು: ಜನವರಿ 11 ರಂದು ಪ್ರಣಾಳಿಕೆ ಸಮಿತಿಯ ಪ್ರಮುಖ ಸಭೆ ನಡೆಯಲಿದ್ದು, 30 ಜಿಲ್ಲೆಗಳಲ್ಲೂ ನವ ಕರ್ನಾಟಕ ವಿಷನ್ ಸಿದ್ಧಪಡಿಸಲಾಗಿದೆ ಎಂದು ಸಂಸದ ಡಾ.ಎಂ.ವೀರಪ್ಪ ಮೊಯಿಲಿ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರೂ ಆಗಿರುವ ವೀರಪ್ಪ ಮೊಯಿಲಿ ಅವರು ಪ್ರಣಾಳಿಕೆ ಸಮಿತಿ ರಚನೆ ಬಳಿಕ ಆರು ಪ್ರದೇಶಗಳಲ್ಲಿ ಸಭೆ ನಡೆಸುವುದಾಗಿ ಹೇಳಿದರು.
ಎಲ್ಲ ಜಿಲ್ಲೆಗಳ ವಿವಿಧ ವಿಭಾಗಗಳ ಪ್ರತಿನಿಧಿಗಳು ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಪ್ರತಿನಿಧಿಗಳಿಂದಿಗೂ ಚರ್ಚೆ ನಡೆಸಲಿದ್ದೇವೆ. ಸೋಮವಾರ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಯಲಿದೆ ಎಂದರು.
ಬಿ.ಎಲ್.ಶಂಕರ್ ನೇತೃತ್ವದಲ್ಲಿ ಈ ಹಿಂದಿನ ಪ್ರಣಾಳಿಕೆಯ ಪರಾಮರ್ಶೆ ನಡೆಸಲಾಗುತ್ತದೆ. ನಮ್ಮ ಪ್ರಣಾಳಿಕೆ ಜನಪರವಾಗಿರಲಿದೆ. ಆರ್ಥಿಕ, ಸಾಮಾಜಿಕವಾಗಿ ಆಮೂಲಾಗ್ರ ಬದಲಾವಣೆಯಾಗುವ ಐದು ಪ್ರಮುಖ ಕಾರ್ಯಕ್ರಮಗಳಿವೆ. ಕೇಂದ್ರದ ಚುನಾವಣಾ ಪ್ರಣಾಳಿಕೆಯ ಒಪ್ಪಿಗೆ ಬಳಿಕ ನಮ್ಮ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದೇವೆ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.