ಬೆಂಗಳೂರು, ಡಿ. 11– ಮಧುಗಿರಿ ತಾಲ್ಲೂಕಿನ ಹನುಮಂತಪುರ ಮತ್ತು ಅದರ ಸುತ್ತಮುತ್ತಲಿನ ಗ್ರಾಮಗಳ ಮೇಲೆ ಈ ತಿಂಗಳು ಆದಿಭಾಗದಲ್ಲಿ ಪೊಲೀಸಿನವರು ವಿನಾಕಾರಣ ದಾಳಿ ಮಾಡಿ ಮುಗ್ಧ ರೈತರು ಮತ್ತು ಅವರ ಹೆಂಗಸರು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರಲ್ಲದೆ ಕೈಗೆ ಸಿಕ್ಕಿದವ ರಿಗೆ ಚಿತ್ರಹಿಂಸೆ ಕೊಟ್ಟರೆಂದು ಕೊರಟಗೆರೆ ತಾಲ್ಲೂಕಿನ ರೈತ ಸಂಘದ ಅಧ್ಯಕ್ಷ ಶ್ರೀ ಚನ್ನಪ್ಪನವರು ಆಪಾದಿಸಿದರು.