2008ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು, ಶಿವರಾಮ ಕಾರಂತ ಬಡಾವಣೆಗಾಗಿ ಸುತ್ತಲಿನ 17 ಗ್ರಾಮಗಳ 3,546 ಎಕರೆ ಭೂಮಿಯ ಸ್ವಾಧೀನ ಪಡೆಸಿಕೊಳ್ಳುವ ಪ್ರಕ್ರಿಯೆಗೆ ಹೊರಡಿಸಲಾಗಿದ್ದ ಅಧಿಸೂಚನೆಯಿಂದ 257 ಎಕರೆ ಭೂಮಿಯನ್ನು ಹೊರಗಿರಿಸಲು ಹಣ ಪಡೆದಿರುವ ಸಾಧ್ಯತೆ ಇದೆ ಎಂಬ ಆರೋಪಗಳೂ ಕೇಳಿಬಂದಿವೆ ಎಂದು ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯಲ್ಲಿ ತಿಳಿಸಲಾಗಿದೆ.