ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರ ಜೀವಕ್ಕೂ ಹಾನಿಯಾಗಬಾರದು. ಆದರೆ, ಹೊನ್ನಾವರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದಕ್ಕೆ ಕಾರಣ ಏನೆಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲದೆ, ಮರಣೋತ್ತರ ವರದಿ ಇನ್ನೂ ಬಂದಿಲ್ಲ. ಹೀಗಿರುವಾಗ ಅದು ಕೊಲೆ ಎಂದು ತೀರ್ಮಾನಿಸಿ ಬಿಜೆಪಿ ಅಲ್ಲಿನ ಜನರ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡುತ್ತಿದೆ. ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯಕ್ಕಾಗಿ ಇಂತಹ ವಿಷಯಗಳನ್ನು ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.