ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯಕ್ಕೆ ದುರ್ಬಳಕೆ: ಸಿ.ಎಂ.ಟೀಕೆ

Last Updated 11 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಹೊನ್ನಾವರದಲ್ಲಿ ನಡೆದ ವ್ಯಕ್ತಿಯೊಬ್ಬರ ಸಾವನ್ನು ಬಿಜೆಪಿ ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರ ಜೀವಕ್ಕೂ ಹಾನಿಯಾಗಬಾರದು. ಆದರೆ, ಹೊನ್ನಾವರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದಕ್ಕೆ ಕಾರಣ ಏನೆಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲದೆ, ಮರಣೋತ್ತರ ವರದಿ ಇನ್ನೂ ಬಂದಿಲ್ಲ. ಹೀಗಿರುವಾಗ ಅದು ಕೊಲೆ ಎಂದು ತೀರ್ಮಾನಿಸಿ ಬಿಜೆಪಿ ಅಲ್ಲಿನ ಜನರ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡುತ್ತಿದೆ. ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯಕ್ಕಾಗಿ ಇಂತಹ ವಿಷಯಗಳನ್ನು ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

‘ಯಡಿಯೂರಪ್ಪ ನಿಮ್ಮನ್ನು ಬಚ್ಚಾ ಎಂದು ಕರೆದಿದ್ದಾರಲ್ಲ’ ಎಂಬ ಪ್ರಶ್ನೆಗೆ, ‘ಅವರಿಗೆ ಸಾರ್ವಜನಿಕವಾಗಿ ಮಾತನಾಡುವುದೇ ಗೊತ್ತಿಲ್ಲ. ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಖಾತ್ರಿಯಾಗಿ ಹತಾಶ ಮನಸ್ಥಿತಿಯಿಂದ ಇಂತಹ ಮಾತುಗಳನ್ನಾಡುತ್ತಿದ್ದಾರೆ. ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಮೋದಿ, ಯಡಿಯೂರಪ್ಪ ಅಂತಹವರನ್ನು ಅನುಸರಿಸುವುದಿಲ್ಲ. ನನ್ನದೇ ಹಾದಿಯಲ್ಲಿ ನಡೆಯುತ್ತಿದ್ದೇನೆ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT