<p><strong>ಬೆಂಗಳೂರು:</strong> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಚಿತ್ರ ಕಲಾವಿದ ಎಂ.ಎಸ್. ಮೂರ್ತಿ ಅವರಿಗೆ ಜೀವಮಾನದ ಸಾಧನೆಗಾಗಿ ‘ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ’ ನೀಡುವುದನ್ನು ವಿರೋಧಿಸಿ ಕಲಾವಿದರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದ ಪ್ರಸಂಗ ನಡೆಯಿತು.</p>.<p>ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲು ಮೂರ್ತಿ ಅವರನ್ನು ಆಹ್ವಾನಿಸುತ್ತಿದ್ದಂತೆ ಗ್ಯಾಲರಿಯಲ್ಲಿ ಕುಳಿತಿದ್ದ ವೆಂಕಟಪ್ಪ ಆರ್ಟ್ ಗ್ಯಾಲರಿ ಫೋರಂನ ಕಲಾವಿದರು ಘೋಷಣೆ ಕೂಗಿದರು. ಮುಖಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು. ಇದರಿಂದ ಕಾರ್ಯಕ್ರಮದಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು.</p>.<p>ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು, ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿ ಹೊರಗೆ ಕೊರೆದೊಯ್ದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p><strong>ವಿರೋಧ ಏಕೆ?: </strong>ಕಲಾರಂಗದಲ್ಲಿನ ಹಿರಿತನ ಮತ್ತು ಅವರ ಒಟ್ಟಾರೆ ಸಾಧನೆ ಪರಿಗಣಿಸಿ ಸರ್ಕಾರ ಪ್ರತಿವರ್ಷ ವೆಂಕಟಪ್ಪ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿದೆ. ಈ ವರ್ಷ ಎಲ್ಲಾ ಮಾನದಂಡಗಳನ್ನು ಬದಿಗಿರಿಸಿ 57 ವರ್ಷದ ಎಂ.ಎಸ್. ಮೂರ್ತಿ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಆರೋಪಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೆ ಬರೆದಿದ್ದ ಪತ್ರದ ಪ್ರತಿಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಭಟನಾನಿರತ ಕಲಾವಿದರು ಬಿಡುಗಡೆ ಮಾಡಿದರು.</p>.<p>ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾಗಿದ್ದ ಎಂ.ಎಸ್.ಮೂರ್ತಿ ಇತ್ತೀಚೆಗಷ್ಟೇ ಅವಧಿ ಪೂರೈಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದಲ್ಲಿ ಲಾಬಿ ನಡೆಸಿ ಈ ಪ್ರಶಸ್ತಿ ಪಡೆದಿದ್ದಾರೆ ಎಂದು ಆಪಾದಿಸಿದರು.</p>.<p>‘ಈ ಹಿಂದೆ ಪ್ರಶಸ್ತಿ ಸ್ವೀಕರಿಸಿದವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸುವುದು ಹಿಂದಿನಿಂದ ನಡೆದುಕೊಂಡು ಬಂದಿದೆ. ಅದರಂತೆ ಎಂ.ಆರ್. ಬಾಳೇಕಾಯಿ ಸಮಿತಿಗೆ ಅಧ್ಯಕ್ಷರಾಗಬೇಕಿತ್ತು. ಆದರೆ, ಎಸ್.ಜಿ. ವಾಸುದೇವ್ ಅವರನ್ನುಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ’ ಎಂದೂ ಆರೋಪಿಸಿದರು.</p>.<p><strong>ಸರ್ಕಾರದ ಹಸ್ತಕ್ಷೇಪ ಇಲ್ಲ</strong></p>.<p>ಪ್ರಶಸ್ತಿ ಪ್ರದಾನದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವುದರಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ. ಯಾವುದೇ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಸಮಿತಿ ರಚಿಸುತ್ತದೆ. ಆ ಸಮಿತಿ ತೀರ್ಮಾನವೇ ಅಂತಿಮ’ ಎಂದು ಸ್ಪಷ್ಟಪಡಿಸಿದರು.</p>.<p>ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೂ ಮಾನದಂಡ ರೂಪಿಸಿ ಅದರ ಘನತೆಯನ್ನು ಸರ್ಕಾರ ಹೆಚ್ಚಿಸಿದೆ. ಎಲ್ಲಾ ಕ್ಷೇತ್ರಗಳಲ್ಲೂ ಸಾಧಕರು ಸಾಕಷ್ಟು ಸಂಖ್ಯೆಯಲ್ಲಿ ಇರುತ್ತಾರೆ. ಅವರಲ್ಲಿ ಹಿರಿಯರನ್ನು ಗುರುತಿಸಿ ಗೌರವಿಸಲಾಗುತ್ತಿದೆ’ ಎಂದರು.</p>.<p><strong>15 ಸಾಧಕರಿಗೆ ಪ್ರಶಸ್ತಿ ಪ್ರದಾನ</strong></p>.<p>ಪಂಡಿತ ರಘುನಾಥ ನಾಕೋಡ್, ಸ. ಉಷಾ, ಜಿ. ಮಾದೇಗೌಡ, ಥೆರೇಸಮ್ಮ ಡಿಸೋಜಾ, ಬಿ.ಎ. ಜಮಾದಾರ್, ನಂದಿನಿ ಈಶ್ವರ್, ಶಾಂತಾ ಕೌತಾಳ, ಅಮೀನ್ ಸಾ ಶರೀಫ್ ವಠಾರ, ಬಿ. ರಾಮದಾಸಪ್ಪ, ಎಚ್.ಎನ್.ಕೃಷ್ಣಮೂರ್ತಿ, ಎಂ.ಎಸ್.ಮೂರ್ತಿ, ಉಡುತಡಿಯ ಅಕ್ಕಮಹಾದೇವಿ ಸಮಿತಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರಾಗಿದ್ದ ಇತಿಹಾಸಕಾರ ರಾಮಚಂದ್ರ ಗುಹಾ, ಲಲಿತಾ ಜೆ.ರಾವ್ ಅವರಿಗೂ ಇದೇ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಚಿತ್ರ ಕಲಾವಿದ ಎಂ.ಎಸ್. ಮೂರ್ತಿ ಅವರಿಗೆ ಜೀವಮಾನದ ಸಾಧನೆಗಾಗಿ ‘ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ’ ನೀಡುವುದನ್ನು ವಿರೋಧಿಸಿ ಕಲಾವಿದರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದ ಪ್ರಸಂಗ ನಡೆಯಿತು.</p>.<p>ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲು ಮೂರ್ತಿ ಅವರನ್ನು ಆಹ್ವಾನಿಸುತ್ತಿದ್ದಂತೆ ಗ್ಯಾಲರಿಯಲ್ಲಿ ಕುಳಿತಿದ್ದ ವೆಂಕಟಪ್ಪ ಆರ್ಟ್ ಗ್ಯಾಲರಿ ಫೋರಂನ ಕಲಾವಿದರು ಘೋಷಣೆ ಕೂಗಿದರು. ಮುಖಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು. ಇದರಿಂದ ಕಾರ್ಯಕ್ರಮದಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು.</p>.<p>ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು, ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿ ಹೊರಗೆ ಕೊರೆದೊಯ್ದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p><strong>ವಿರೋಧ ಏಕೆ?: </strong>ಕಲಾರಂಗದಲ್ಲಿನ ಹಿರಿತನ ಮತ್ತು ಅವರ ಒಟ್ಟಾರೆ ಸಾಧನೆ ಪರಿಗಣಿಸಿ ಸರ್ಕಾರ ಪ್ರತಿವರ್ಷ ವೆಂಕಟಪ್ಪ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿದೆ. ಈ ವರ್ಷ ಎಲ್ಲಾ ಮಾನದಂಡಗಳನ್ನು ಬದಿಗಿರಿಸಿ 57 ವರ್ಷದ ಎಂ.ಎಸ್. ಮೂರ್ತಿ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಆರೋಪಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೆ ಬರೆದಿದ್ದ ಪತ್ರದ ಪ್ರತಿಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಭಟನಾನಿರತ ಕಲಾವಿದರು ಬಿಡುಗಡೆ ಮಾಡಿದರು.</p>.<p>ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾಗಿದ್ದ ಎಂ.ಎಸ್.ಮೂರ್ತಿ ಇತ್ತೀಚೆಗಷ್ಟೇ ಅವಧಿ ಪೂರೈಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದಲ್ಲಿ ಲಾಬಿ ನಡೆಸಿ ಈ ಪ್ರಶಸ್ತಿ ಪಡೆದಿದ್ದಾರೆ ಎಂದು ಆಪಾದಿಸಿದರು.</p>.<p>‘ಈ ಹಿಂದೆ ಪ್ರಶಸ್ತಿ ಸ್ವೀಕರಿಸಿದವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸುವುದು ಹಿಂದಿನಿಂದ ನಡೆದುಕೊಂಡು ಬಂದಿದೆ. ಅದರಂತೆ ಎಂ.ಆರ್. ಬಾಳೇಕಾಯಿ ಸಮಿತಿಗೆ ಅಧ್ಯಕ್ಷರಾಗಬೇಕಿತ್ತು. ಆದರೆ, ಎಸ್.ಜಿ. ವಾಸುದೇವ್ ಅವರನ್ನುಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ’ ಎಂದೂ ಆರೋಪಿಸಿದರು.</p>.<p><strong>ಸರ್ಕಾರದ ಹಸ್ತಕ್ಷೇಪ ಇಲ್ಲ</strong></p>.<p>ಪ್ರಶಸ್ತಿ ಪ್ರದಾನದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವುದರಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ. ಯಾವುದೇ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಸಮಿತಿ ರಚಿಸುತ್ತದೆ. ಆ ಸಮಿತಿ ತೀರ್ಮಾನವೇ ಅಂತಿಮ’ ಎಂದು ಸ್ಪಷ್ಟಪಡಿಸಿದರು.</p>.<p>ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೂ ಮಾನದಂಡ ರೂಪಿಸಿ ಅದರ ಘನತೆಯನ್ನು ಸರ್ಕಾರ ಹೆಚ್ಚಿಸಿದೆ. ಎಲ್ಲಾ ಕ್ಷೇತ್ರಗಳಲ್ಲೂ ಸಾಧಕರು ಸಾಕಷ್ಟು ಸಂಖ್ಯೆಯಲ್ಲಿ ಇರುತ್ತಾರೆ. ಅವರಲ್ಲಿ ಹಿರಿಯರನ್ನು ಗುರುತಿಸಿ ಗೌರವಿಸಲಾಗುತ್ತಿದೆ’ ಎಂದರು.</p>.<p><strong>15 ಸಾಧಕರಿಗೆ ಪ್ರಶಸ್ತಿ ಪ್ರದಾನ</strong></p>.<p>ಪಂಡಿತ ರಘುನಾಥ ನಾಕೋಡ್, ಸ. ಉಷಾ, ಜಿ. ಮಾದೇಗೌಡ, ಥೆರೇಸಮ್ಮ ಡಿಸೋಜಾ, ಬಿ.ಎ. ಜಮಾದಾರ್, ನಂದಿನಿ ಈಶ್ವರ್, ಶಾಂತಾ ಕೌತಾಳ, ಅಮೀನ್ ಸಾ ಶರೀಫ್ ವಠಾರ, ಬಿ. ರಾಮದಾಸಪ್ಪ, ಎಚ್.ಎನ್.ಕೃಷ್ಣಮೂರ್ತಿ, ಎಂ.ಎಸ್.ಮೂರ್ತಿ, ಉಡುತಡಿಯ ಅಕ್ಕಮಹಾದೇವಿ ಸಮಿತಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರಾಗಿದ್ದ ಇತಿಹಾಸಕಾರ ರಾಮಚಂದ್ರ ಗುಹಾ, ಲಲಿತಾ ಜೆ.ರಾವ್ ಅವರಿಗೂ ಇದೇ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>