ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಯಾವುದೇ ಅನಾಹುತ ಸಂಭವಿಸಿದಂತೆ ಆನೆಗಳನ್ನು ಸಮೀಪದ ಅರಣ್ಯಕ್ಕೆ ಓಡಿಸಲು ಹರಸಾಹಸ ಪಡುತ್ತಿದ್ದಾರೆ. ಹಗಲಿನ ಸಮಯದಲ್ಲಿ ಆನೆಗಳನ್ನು ಚದುರಿಸಿದರೆ ಅನಾಹುತ ಸಂಭವಿಸಬಹುದು ಎಂಬ ಕಾರಣಕ್ಕೆ ರಾತ್ರಿವೇಳೆಯಲ್ಲಿ ಕಾಡಿಗಟ್ಟುವ ಪ್ರಯತ್ನ ಮಾಡುತ್ತಿದ್ದಾರೆ.