ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆ ವಿಫಲವಾಗಿದೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಕಲಬುರ್ಗಿ ಜಿಲ್ಲೆಯೂ ಸೇರಿದಂತೆ ಎಲ್ಲೆಡೆ ಪರಿವರ್ತನಾ ಯಾತ್ರೆ ಯಶಸ್ವಿಯಾಗಿದೆ. ಸಿದ್ದರಾಮಯ್ಯಗೆ ತಲೆ ಸರಿ ಇಲ್ಲ. ಅದಕ್ಕೆ ಈ ರೀತಿ ಮಾತನಾಡಿದ್ದಾನೆ’ ಎಂದು ಏಕವಚನದಲ್ಲೇ ಕಿಡಿಕಾರಿದರು.