ರಾಜ್ಯದಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ಸರ್ಕಾರ ಅನುಮತಿ ನೀಡುತ್ತಿಲ್ಲ. ಅದರೆ ರಂಜಾನ್, ಈದ್ ಮಿಲಾದ್ ಹಬ್ಬಗಳ ಮೆರವಣಿಗೆಗೆ ಅವಕಾಶ ಕಲ್ಪಿಸುತ್ತಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಹಿಂದೂಪರ ಸಂಘಟನೆಗಳ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿವೆ. ಜಗನ್ನಾಥ ಶೆಟ್ಡಿ ಆಯೋಗ ವರದಿ ಜಾರಿಗೊಳಿಸಲು ಈ ಸರ್ಕಾರ ಯಾಕೆ ಹಿಂದೇಡು ಹಾಕುತ್ತಿದೆ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕಿದೆ ಎಂದು ಆಗ್ರಹಿಸಿದರು.