<p><strong>ಬೆಂಗಳೂರು:</strong> ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) 2017–18ನೇ ಸಾಲಿನ ತಾಂತ್ರಿಕೇತರ ಕೋರ್ಸ್ಗಳಿಗೆ 2 ವಾರಗಳಲ್ಲಿ ಮಾನ್ಯತೆ ನೀಡುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಹೈಕೋರ್ಟ್ ನಿರ್ದೇಶಿಸಿದೆ.</p>.<p>ಇದರಿಂದಾಗಿ ಕೆಎಸ್ಒಯುಗೆ ಸಂಬಂಧಿಸಿದಂತೆ ಸದ್ಯ ವಾಜ್ಯದಲ್ಲಿರುವ ಹಲವು ಅರ್ಜಿಗಳಿಗೆ ಈ ಆದೇಶ ದಿಕ್ಸೂಚಿಯಾಗಲಿದೆ ಎಂದೇ ಭಾವಿಸಲಾಗಿದೆ.</p>.<p>ಕೆಎಸ್ಒಯು ಕೋರ್ಸ್ಗಳಿಗೆ ನೀಡಲಾಗಿದ್ದ ಮಾನ್ಯತೆಯನ್ನು ಯುಜಿಸಿ 2013ನೇ ಸಾಲಿನಿಂದ ರದ್ದುಪಡಿಸಿತ್ತು. ಅಲ್ಲಿಂದ ಇಲ್ಲಿವರೆಗೂ ವಿ.ವಿಗೆ ಮಾನ್ಯತೆ ಸಿಕ್ಕಿಲ್ಲ. ಈಗ ಹೈಕೋರ್ಟ್ನ ಆದೇಶ ವಿದ್ಯಾರ್ಥಿಗಳು ಮತ್ತು ಕೆಎಸ್ಒಯುಗೆ ನಿರಾಳ ಭಾವ ಮೂಡಿಸಿದೆ.</p>.<p>ಕೆಎಸ್ಒಯುನ ವಿವಿಧ ಕೋರ್ಸ್ಗಳಿಗೆ ಮಾನ್ಯತೆ ನೀಡಲು ಯುಜಿಸಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>‘ದೇಶದ ಬೇರೆ ಬೇರೆ ವಿವಿಗಳಿಗೆ ಅವಧಿ ಮೀರಿದ ಬಳಿಕವೂ ಮಾನ್ಯತೆ ನೀಡಬಹುದಾದರೆ ಕೆಎಸ್ಒಯುಗೆ ಏಕೆ ಮಾನ್ಯತೆ ನೀಡಲು ಸಾಧ್ಯವಿಲ್ಲ’ ಎಂದು ಪ್ರಶ್ನಿಸಿದ ನ್ಯಾಯಪೀಠ, ‘ಕೆಎಸ್ಒಯು ಮನವಿ ತಿರಸ್ಕರಿಸಲು ಯುಜಿಸಿ ಅಧಿಕಾರಿಗಳು ನೀಡಿರುವ ಕಾರಣ ತೃಪ್ತಿಕರವಾಗಿಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.</p>.<p>‘ಯಾವುದೇ ಅಧ್ಯಯನ ಕೇಂದ್ರಗಳಲ್ಲದೇ ನೇರವಾಗಿ ವಿಶ್ವವಿದ್ಯಾಲಯದಲ್ಲಿ ದಾಖಲಾಗಿರುವ ತಾಂತ್ರಿಕೇತರ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ 2017–18ನೇ ಸಾಲಿಗೆ ಮಾನ್ಯತೆ ನೀಡಬೇಕು’ ಎಂದು ಯುಜಿಸಿಗೆ ನಿರ್ದೇಶಿಸಿತು.</p>.<p>ಅರ್ಜಿದಾರರ ಪರವಾಗಿ ರಾಜೇಂದರ್ ಕುಮಾರ್ ಸುಂಗೆ ಟಿ.ಪಿ ಹಾಗೂ ಯುಜಿಸಿ ಪರವಾಗಿ ಕ್ಯಾಪ್ಟನ್ ಅರವಿಂದ ಶರ್ಮಾ ಹಾಜರಿದ್ದರು.</p>.<p>2017–18ನೇ ಶೈಕ್ಷಣಿಕ ಸಾಲಿಗೆ ಮಾನ್ಯತೆ ನೀಡಬೇಕು, 2013–14 ಹಾಗೂ 2014–15ನೇ ಸಾಲಿನ 96 ವಿದ್ಯಾರ್ಥಿಗಳು ಪಡೆದ ಪದವಿಗೆ ಮಾನ್ಯತೆ ನೀಡಬೇಕು ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನೋಂದಣಿಯಾದ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡೆದ ಪದವಿಗೆ ಮಾನ್ಯತೆ ನೀಡಬೇಕು ಎಂದು ವಿ.ವಿ ಸರ್ಕಾರಕ್ಕೆ ಪತ್ರ ಬರೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) 2017–18ನೇ ಸಾಲಿನ ತಾಂತ್ರಿಕೇತರ ಕೋರ್ಸ್ಗಳಿಗೆ 2 ವಾರಗಳಲ್ಲಿ ಮಾನ್ಯತೆ ನೀಡುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಹೈಕೋರ್ಟ್ ನಿರ್ದೇಶಿಸಿದೆ.</p>.<p>ಇದರಿಂದಾಗಿ ಕೆಎಸ್ಒಯುಗೆ ಸಂಬಂಧಿಸಿದಂತೆ ಸದ್ಯ ವಾಜ್ಯದಲ್ಲಿರುವ ಹಲವು ಅರ್ಜಿಗಳಿಗೆ ಈ ಆದೇಶ ದಿಕ್ಸೂಚಿಯಾಗಲಿದೆ ಎಂದೇ ಭಾವಿಸಲಾಗಿದೆ.</p>.<p>ಕೆಎಸ್ಒಯು ಕೋರ್ಸ್ಗಳಿಗೆ ನೀಡಲಾಗಿದ್ದ ಮಾನ್ಯತೆಯನ್ನು ಯುಜಿಸಿ 2013ನೇ ಸಾಲಿನಿಂದ ರದ್ದುಪಡಿಸಿತ್ತು. ಅಲ್ಲಿಂದ ಇಲ್ಲಿವರೆಗೂ ವಿ.ವಿಗೆ ಮಾನ್ಯತೆ ಸಿಕ್ಕಿಲ್ಲ. ಈಗ ಹೈಕೋರ್ಟ್ನ ಆದೇಶ ವಿದ್ಯಾರ್ಥಿಗಳು ಮತ್ತು ಕೆಎಸ್ಒಯುಗೆ ನಿರಾಳ ಭಾವ ಮೂಡಿಸಿದೆ.</p>.<p>ಕೆಎಸ್ಒಯುನ ವಿವಿಧ ಕೋರ್ಸ್ಗಳಿಗೆ ಮಾನ್ಯತೆ ನೀಡಲು ಯುಜಿಸಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>‘ದೇಶದ ಬೇರೆ ಬೇರೆ ವಿವಿಗಳಿಗೆ ಅವಧಿ ಮೀರಿದ ಬಳಿಕವೂ ಮಾನ್ಯತೆ ನೀಡಬಹುದಾದರೆ ಕೆಎಸ್ಒಯುಗೆ ಏಕೆ ಮಾನ್ಯತೆ ನೀಡಲು ಸಾಧ್ಯವಿಲ್ಲ’ ಎಂದು ಪ್ರಶ್ನಿಸಿದ ನ್ಯಾಯಪೀಠ, ‘ಕೆಎಸ್ಒಯು ಮನವಿ ತಿರಸ್ಕರಿಸಲು ಯುಜಿಸಿ ಅಧಿಕಾರಿಗಳು ನೀಡಿರುವ ಕಾರಣ ತೃಪ್ತಿಕರವಾಗಿಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.</p>.<p>‘ಯಾವುದೇ ಅಧ್ಯಯನ ಕೇಂದ್ರಗಳಲ್ಲದೇ ನೇರವಾಗಿ ವಿಶ್ವವಿದ್ಯಾಲಯದಲ್ಲಿ ದಾಖಲಾಗಿರುವ ತಾಂತ್ರಿಕೇತರ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ 2017–18ನೇ ಸಾಲಿಗೆ ಮಾನ್ಯತೆ ನೀಡಬೇಕು’ ಎಂದು ಯುಜಿಸಿಗೆ ನಿರ್ದೇಶಿಸಿತು.</p>.<p>ಅರ್ಜಿದಾರರ ಪರವಾಗಿ ರಾಜೇಂದರ್ ಕುಮಾರ್ ಸುಂಗೆ ಟಿ.ಪಿ ಹಾಗೂ ಯುಜಿಸಿ ಪರವಾಗಿ ಕ್ಯಾಪ್ಟನ್ ಅರವಿಂದ ಶರ್ಮಾ ಹಾಜರಿದ್ದರು.</p>.<p>2017–18ನೇ ಶೈಕ್ಷಣಿಕ ಸಾಲಿಗೆ ಮಾನ್ಯತೆ ನೀಡಬೇಕು, 2013–14 ಹಾಗೂ 2014–15ನೇ ಸಾಲಿನ 96 ವಿದ್ಯಾರ್ಥಿಗಳು ಪಡೆದ ಪದವಿಗೆ ಮಾನ್ಯತೆ ನೀಡಬೇಕು ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನೋಂದಣಿಯಾದ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡೆದ ಪದವಿಗೆ ಮಾನ್ಯತೆ ನೀಡಬೇಕು ಎಂದು ವಿ.ವಿ ಸರ್ಕಾರಕ್ಕೆ ಪತ್ರ ಬರೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>