ಯುನೈಟೆಡ್ ಬೆಂಗಳೂರು ಸಂಸ್ಥೆ ನಗರದ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಮತದಾರರ ನೋಂದಣಿ ಅಭಿಯಾನದಲ್ಲಿ ಮಾತನಾಡಿದ ಅವರು, ‘ಇಂದು ಯುವಕರು ರಾಜಕೀಯದ ಬಗ್ಗೆ ಸಿನಿಕರಾಗಿದ್ದಾರೆ. ನೋಂದಾಯಿಸಿಕೊಂಡ ಅರ್ಧದಷ್ಟು ಯುವಕರು ಮತ ಹಾಕುವುದಿಲ್ಲ. ಉಳಿದರ್ಧ ಯುವಕರು ಮತದಾನಕ್ಕೆ ನೋಂದಾಯಿಸಿಕೊಳ್ಳದೆ ಚುನಾವಣಾ ಪ್ರಕ್ರಿಯೆಯಿಂದ ದೂರವೇ ಉಳಿದಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ’ ಎಂದರು.