ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮಾ ಬಂಟಕಲ್ಲು, ಹೊಸ ಪಂಪ್ಸೆಟ್ಗೆ ವಿದ್ಯುತ್ ಸಂಪರ್ಕ ಪಡೆಯಲು ಮೆಸ್ಕಾಂ ಹೆಚ್ಚುವರಿ ₹10,000 ಶುಲ್ಕ ವಿಧಿಸುತ್ತಿದೆ. ಇದು ರೈತರಿಗೆ ಹೊರೆಯಾಗಿದ್ದು ಈ ಕೂಡಲೇ ಶುಲ್ಕ ರದ್ದು ಮಾಡಬೇಕು. ರೈತರು ಬಂಡವಾಳ ಹಾಗೂ ಶ್ರಮ ಹಾಕಿ ಬೆಳೆದ ಬೆಳೆಗಳು ಕಾಡು ಪ್ರಾಣಿಗಳ ಹಾವಳಿಯಿಂದ ನಾಶವಾಗುತ್ತಿವೆ. ಇದರಿಂದಾಗಿ ರೈತರು ತೀವ್ರ ನಷ್ಟ ಎದುರಿಸುವಂತಾಗಿದೆ. ಈ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.