<p><strong>ಬೆಂಗಳೂರು:</strong> ‘ಪರೇಶ ಮೇಸ್ತ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ನಾಪತ್ತೆ ಆಗಿದ್ದು, ಸರ್ಕಾರದ ಒತ್ತಡ ಇರುವುದರಿಂದಲೇ ಅವರು ಮಣಿಪಾಲ ಬಿಟ್ಟು ತೆರಳಿದ್ದಾರೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.</p>.<p>‘ವೈದ್ಯರು ಮೂರು ದಿನಗಳಿಂದ ಮಣಿಪಾಲದಲ್ಲಿ ಇಲ್ಲ. ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದೆ. ಅವರು ಎಲ್ಲಿಗೆ ಹೋಗಿದ್ದಾರೆ ಎಂಬುದು ಮಣಿಪಾಲ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಯಾರಿಗೂ ಗೊತ್ತಿಲ್ಲ’ ಎಂದು ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದ ಏನೆಲ್ಲ ಮಾಹಿತಿ ಇದೆಯೋ ಅವೆಲ್ಲವನ್ನೂ ಬಹಿರಂಗಪಡಿಸಬೇಕು. ಈ ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಸರ್ಕಾರ ಪೊಲೀಸರ ಮೂಲಕ ತಮಗೆ ಬೇಕಾದಂತೆ ಪ್ರಶ್ನೆಗಳನ್ನು ಕೇಳಿ ವೈದ್ಯರಿಂದ ಉತ್ತರ ಪಡೆದಿದ್ದಾರೆ. ಸತ್ಯಾಂಶವನ್ನು ಆಸ್ಪತ್ರೆಯವರೇ ಬಹಿರಂಗಪಡಿಬೇಕು’ ಎಂದು ಅವರು ಹೇಳಿದರು.</p>.<p>‘ಹಿಂದುಗಳ ಸಾವಿನ ಬಗ್ಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಬೇಜವಾಬ್ದಾರಿಯ ಮಾತುಗಳನ್ನು ಆಡುತ್ತಿದ್ದಾರೆ. ಪರೇಶ ಮೇಸ್ತ ಹತ್ಯೆಯನ್ನು ಸಣ್ಣ ಸಂಗತಿ ಎಂದು ವ್ಯಾಖ್ಯಾನಿಸಿದ್ದಾರೆ. ರಾಜ್ಯದ ಜನರಿಗೆ ರಕ್ಷಣೆ ನೀಡಬೇಕಾದ ಸಚಿವರೇ ಈ ರೀತಿಯ ಮಾತನ್ನು ಆಡಿದರೆ, ಜನ ಸಾಮಾನ್ಯರ ಗತಿ ಏನು’ ಎಂದು ಪ್ರಶ್ನಿಸಿದರು.</p>.<p>ಪರೇಶ ಮೇಸ್ತ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎನ್ಐಎಗೆ ಒಪ್ಪಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಇದೇ 15 ರಂದು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಅವರು ತಿಳಿಸಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪುವೇ ಪುನರ್ ಜನ್ಮ ಎತ್ತಿ ಬಂದಂತೆ ವರ್ತಿಸುತ್ತಿದ್ದಾರೆ. ಐಸಿಸ್ ಜೊತೆ ನಂಟು ಹೊಂದಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಎಲ್ಲಿಲ್ಲದ ಆದ್ಯತೆ ನೀಡುತ್ತಿದ್ದಾರೆ ಎಂದು ಶೋಭಾ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪರೇಶ ಮೇಸ್ತ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ನಾಪತ್ತೆ ಆಗಿದ್ದು, ಸರ್ಕಾರದ ಒತ್ತಡ ಇರುವುದರಿಂದಲೇ ಅವರು ಮಣಿಪಾಲ ಬಿಟ್ಟು ತೆರಳಿದ್ದಾರೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.</p>.<p>‘ವೈದ್ಯರು ಮೂರು ದಿನಗಳಿಂದ ಮಣಿಪಾಲದಲ್ಲಿ ಇಲ್ಲ. ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದೆ. ಅವರು ಎಲ್ಲಿಗೆ ಹೋಗಿದ್ದಾರೆ ಎಂಬುದು ಮಣಿಪಾಲ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಯಾರಿಗೂ ಗೊತ್ತಿಲ್ಲ’ ಎಂದು ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದ ಏನೆಲ್ಲ ಮಾಹಿತಿ ಇದೆಯೋ ಅವೆಲ್ಲವನ್ನೂ ಬಹಿರಂಗಪಡಿಸಬೇಕು. ಈ ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಸರ್ಕಾರ ಪೊಲೀಸರ ಮೂಲಕ ತಮಗೆ ಬೇಕಾದಂತೆ ಪ್ರಶ್ನೆಗಳನ್ನು ಕೇಳಿ ವೈದ್ಯರಿಂದ ಉತ್ತರ ಪಡೆದಿದ್ದಾರೆ. ಸತ್ಯಾಂಶವನ್ನು ಆಸ್ಪತ್ರೆಯವರೇ ಬಹಿರಂಗಪಡಿಬೇಕು’ ಎಂದು ಅವರು ಹೇಳಿದರು.</p>.<p>‘ಹಿಂದುಗಳ ಸಾವಿನ ಬಗ್ಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಬೇಜವಾಬ್ದಾರಿಯ ಮಾತುಗಳನ್ನು ಆಡುತ್ತಿದ್ದಾರೆ. ಪರೇಶ ಮೇಸ್ತ ಹತ್ಯೆಯನ್ನು ಸಣ್ಣ ಸಂಗತಿ ಎಂದು ವ್ಯಾಖ್ಯಾನಿಸಿದ್ದಾರೆ. ರಾಜ್ಯದ ಜನರಿಗೆ ರಕ್ಷಣೆ ನೀಡಬೇಕಾದ ಸಚಿವರೇ ಈ ರೀತಿಯ ಮಾತನ್ನು ಆಡಿದರೆ, ಜನ ಸಾಮಾನ್ಯರ ಗತಿ ಏನು’ ಎಂದು ಪ್ರಶ್ನಿಸಿದರು.</p>.<p>ಪರೇಶ ಮೇಸ್ತ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎನ್ಐಎಗೆ ಒಪ್ಪಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಇದೇ 15 ರಂದು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಅವರು ತಿಳಿಸಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪುವೇ ಪುನರ್ ಜನ್ಮ ಎತ್ತಿ ಬಂದಂತೆ ವರ್ತಿಸುತ್ತಿದ್ದಾರೆ. ಐಸಿಸ್ ಜೊತೆ ನಂಟು ಹೊಂದಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಎಲ್ಲಿಲ್ಲದ ಆದ್ಯತೆ ನೀಡುತ್ತಿದ್ದಾರೆ ಎಂದು ಶೋಭಾ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>