ಕಳೆದ ಕೆಲವು ವಾರ ಗುಜರಾತಿನ ವಿವಿಧೆಡೆ ಭರದ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೆಹಲಿಗೆ ಹಿಂದಿರುಗಿದ್ದಾರೆ. ಬಹಿರಂಗ ಪ್ರಚಾರದ ಅಬ್ಬರ ನಿಂತು ಹೋಗಿದ್ದರೂ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳ ಮೂಲಕ ಮತದಾರರ ಮನವೊಲಿಸುವ ಕೊನೆಯ ಕ್ಷಣದಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಎಲ್ಲ 93 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿದ್ದರೆ 91 ಕಡೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ನಿಲ್ಲಿಸಿದೆ. ಬಿಜೆಪಿ ಮಿತ್ರ ಪಕ್ಷ ಶಿವಸೇನಾದ 17 ಉಮೇದುವಾರರು ಕಣದಲ್ಲಿದ್ದಾರೆ.