<p><strong>ಶಿಗ್ಗಾವಿ: ಕ</strong>ಳೆದ ಐದು ವರ್ಷಗಳ ಕಾಂಗ್ರೆಸ್ ಸರ್ಕಾದ ಆಡಳಿತದಲ್ಲಿನ ಸಮಾಜಗಳನ್ನು ವಿಂಗಡಿಸುವ ನೀತಿ ಯಿಂದ ಜನ ಬೇಸತ್ತು ಹೋಗಿದ್ದಾರೆ.ಅದರಿಂದಾಗಿ ಜನವಿರೋಧಿ, ರೈತವಿರೋಧಿ ಸರ್ಕಾರಕ್ಕೆ ಮುಂಬರುವ ದಿನಗಳಲ್ಲಿ ಭವಿಷ್ಯವಿಲ್ಲ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಪಟ್ಟಣದಲ್ಲಿ ಬುಧವಾರ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಇದೇ 23ರಂದು ನಗರಕ್ಕೆ ಆಗಮಿಸಲಿದ್ದು ಅದರ ಅಂಗವಾಗಿ ನಡೆದ ಪೂರ್ವಬಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಳೆದ ಡಿ.5ರಂದು ನಡೆದ ಸಮಾವೇಶ ಸರ್ಕಾರದ ಶಕ್ತಿಯಾಗಿತ್ತು. ಆದರೆ ಇದೇ 23ರಂದು ನಡೆಯ ಲಿರುವ ಸಮಾವೇಶ ಜನಶಕ್ತಿ ಸಮಾವೇಶವಾಗಲಿದೆ. ಯಾವುದೇ ತಪ್ಪು ಮಾಡದ ನಿರಪರಾಧಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ನ ಕುತಂತ್ರದಿಂದ ಜೈಲುವಾಸ ಅನುಭವಿಸುವಂತಾಗಿದೆ ಎಂದರು.</p>.<p>ಮತ್ತೆ ಅವರೇ ಮುಖ್ಯಮಂತ್ರಿಗಳಾದರೆ ಕಾಂಗ್ರೆಸ್ ಮುಖಂಡರು ಜೈಲು ವಾಸ ಮಾಡಬೇಕಾಗುತ್ತದೆ ಎಂಬ ಭಯ ಈಗಾಗಲೇ ಕಾಂಗ್ರೆಸಿಗರಲ್ಲಿ ಹುಟ್ಟಿಕೊಂಡಿದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದರು.</p>.<p>ರಾಜ್ಯದ ಎಸ್ಸಿ,ಎಸ್ಟಿ ಜನಾಂಗಕ್ಕೆ ಬಿಡುಗಡೆಯಾದ ₹14ಸಾವಿರ ಕೋಟಿ ಅನುದಾನ ಈ ವರೆಗೆ ವಿತರಣೆ ಮಾಡಿಲ್ಲ. ಅದರಿಂದ ದಲಿತರಿಗೆ, ಅಹಿಂದ ಜನಾಂಗಕ್ಕೆ ಅನ್ಯಾಯವಾಗುತ್ತಿದೆ ಎಂದು ಅವರು ಟೀಕಿಸಿದರು.</p>.<p>ರಾಜ್ಯದಲ್ಲಿ 4ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ಈ ವರೆಗೆ ಪರಿಹಾರಧನ ನೀಡಿಲ್ಲ. ಜಿಲ್ಲೆಗೆ ₹54ಕೋಟಿ ಅನುದಾನ ಬೆಳೆ ವಿಮೆ, ಬೆಳೆ ಪರಿಹಾರಕ್ಕಾಗಿ ಬಿಡುಗಡೆ ಈ ವರೆಗೆ ವಿತರಣೆ ಮಾಡಿಲ್ಲ ಎಂದು ಅವರು ಟೀಕಿಸಿದರು.</p>.<p>ಇದರಿಂದ ರೈತ ಸಮೂಹ ಆರ್ಥಿಕವಾಗಿ ಕುಗ್ಗಿದ್ದಾರೆ. ಆದರೂ ಕಾಂಗ್ರೆಸ್ ಮತ್ತೆ ಆಡಳಿತದ ಕನಸು ಕಾಣುತ್ತಿದೆ ಎಂದ ಅವರು ಅಸ್ಥಿರತೆಯಿಂದ ಸ್ಥಿರತೆಯತ್ತ ಪರಿವರ್ತನೆ ಮಾಡುವ ಉದ್ದೇಶ ಈ ಯಾತ್ರೆಯದಾಗಿದೆ ಎಂದರು.</p>.<p>ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸಿದ್ದರಾಜ ಕಲಕೋಟಿ ಮಾತನಾಡಿ, ಬೂತ್ ಮಟ್ಟದಿಂದ ಕಾರ್ಯಕರ್ತರು ಸಂಘಟಕರಾಗಬೇಕು. ಬಿಜೆಪಿ ಸದಸ್ಯತ್ವದ ಅಭಿಯಾನ ಕಾರ್ಯ ಹೆಚ್ಚಿಸಬೇಕು. ತಂತ್ರಜ್ಞಾನ ಬಳಸಿ ಜನಸಂಪರ್ಕ ಹೆಚ್ಚಿಸಬೇಕು. ಕಾರ್ಯಕರ್ತರ ಶ್ರಮ ದಿಂದ ಪಕ್ಷದ ಅಭಿವೃದ್ಧಿ ಸಾಧ್ಯವಿದೆ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಸಜ್ಜನ ಮಾತನಾಡಿ, ಸರ್ಕಾರದ ಹಣದಲ್ಲಿ ಕಾಂಗ್ರೆಸ್ ಸಮಾವೇಶಗಳು ನಡೆಯುತ್ತಿವೆ. ಈ ವರೆಗೆ ಅಭಿವೃದ್ಧಿ ಮಾಡದ ಕಾಂಗ್ರೆಸ್ ಅಡಿಗಲ್ಲು ಹಾಕಿ ಹೋಗುತ್ತಿದೆ. ನಂತರ ಬಿಜೆಪಿ ಕಾರ್ಯ ಪೂರ್ಣಗೊಳಿಸಲಿದೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ಮುಖಂಡ ಕಲ್ಯಾಣಕುಮಾರ ಶೆಟ್ಟರ್ ಮಾತನಾಡಿದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಪುರಸಭೆ ಸದಸ್ಯರು, ಮುಖಂಡರು ಇದ್ದರು. ಶಿವಾನಂದ ಮ್ಯಾಗೇರಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ: ಕ</strong>ಳೆದ ಐದು ವರ್ಷಗಳ ಕಾಂಗ್ರೆಸ್ ಸರ್ಕಾದ ಆಡಳಿತದಲ್ಲಿನ ಸಮಾಜಗಳನ್ನು ವಿಂಗಡಿಸುವ ನೀತಿ ಯಿಂದ ಜನ ಬೇಸತ್ತು ಹೋಗಿದ್ದಾರೆ.ಅದರಿಂದಾಗಿ ಜನವಿರೋಧಿ, ರೈತವಿರೋಧಿ ಸರ್ಕಾರಕ್ಕೆ ಮುಂಬರುವ ದಿನಗಳಲ್ಲಿ ಭವಿಷ್ಯವಿಲ್ಲ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಪಟ್ಟಣದಲ್ಲಿ ಬುಧವಾರ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಇದೇ 23ರಂದು ನಗರಕ್ಕೆ ಆಗಮಿಸಲಿದ್ದು ಅದರ ಅಂಗವಾಗಿ ನಡೆದ ಪೂರ್ವಬಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಳೆದ ಡಿ.5ರಂದು ನಡೆದ ಸಮಾವೇಶ ಸರ್ಕಾರದ ಶಕ್ತಿಯಾಗಿತ್ತು. ಆದರೆ ಇದೇ 23ರಂದು ನಡೆಯ ಲಿರುವ ಸಮಾವೇಶ ಜನಶಕ್ತಿ ಸಮಾವೇಶವಾಗಲಿದೆ. ಯಾವುದೇ ತಪ್ಪು ಮಾಡದ ನಿರಪರಾಧಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ನ ಕುತಂತ್ರದಿಂದ ಜೈಲುವಾಸ ಅನುಭವಿಸುವಂತಾಗಿದೆ ಎಂದರು.</p>.<p>ಮತ್ತೆ ಅವರೇ ಮುಖ್ಯಮಂತ್ರಿಗಳಾದರೆ ಕಾಂಗ್ರೆಸ್ ಮುಖಂಡರು ಜೈಲು ವಾಸ ಮಾಡಬೇಕಾಗುತ್ತದೆ ಎಂಬ ಭಯ ಈಗಾಗಲೇ ಕಾಂಗ್ರೆಸಿಗರಲ್ಲಿ ಹುಟ್ಟಿಕೊಂಡಿದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದರು.</p>.<p>ರಾಜ್ಯದ ಎಸ್ಸಿ,ಎಸ್ಟಿ ಜನಾಂಗಕ್ಕೆ ಬಿಡುಗಡೆಯಾದ ₹14ಸಾವಿರ ಕೋಟಿ ಅನುದಾನ ಈ ವರೆಗೆ ವಿತರಣೆ ಮಾಡಿಲ್ಲ. ಅದರಿಂದ ದಲಿತರಿಗೆ, ಅಹಿಂದ ಜನಾಂಗಕ್ಕೆ ಅನ್ಯಾಯವಾಗುತ್ತಿದೆ ಎಂದು ಅವರು ಟೀಕಿಸಿದರು.</p>.<p>ರಾಜ್ಯದಲ್ಲಿ 4ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ಈ ವರೆಗೆ ಪರಿಹಾರಧನ ನೀಡಿಲ್ಲ. ಜಿಲ್ಲೆಗೆ ₹54ಕೋಟಿ ಅನುದಾನ ಬೆಳೆ ವಿಮೆ, ಬೆಳೆ ಪರಿಹಾರಕ್ಕಾಗಿ ಬಿಡುಗಡೆ ಈ ವರೆಗೆ ವಿತರಣೆ ಮಾಡಿಲ್ಲ ಎಂದು ಅವರು ಟೀಕಿಸಿದರು.</p>.<p>ಇದರಿಂದ ರೈತ ಸಮೂಹ ಆರ್ಥಿಕವಾಗಿ ಕುಗ್ಗಿದ್ದಾರೆ. ಆದರೂ ಕಾಂಗ್ರೆಸ್ ಮತ್ತೆ ಆಡಳಿತದ ಕನಸು ಕಾಣುತ್ತಿದೆ ಎಂದ ಅವರು ಅಸ್ಥಿರತೆಯಿಂದ ಸ್ಥಿರತೆಯತ್ತ ಪರಿವರ್ತನೆ ಮಾಡುವ ಉದ್ದೇಶ ಈ ಯಾತ್ರೆಯದಾಗಿದೆ ಎಂದರು.</p>.<p>ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸಿದ್ದರಾಜ ಕಲಕೋಟಿ ಮಾತನಾಡಿ, ಬೂತ್ ಮಟ್ಟದಿಂದ ಕಾರ್ಯಕರ್ತರು ಸಂಘಟಕರಾಗಬೇಕು. ಬಿಜೆಪಿ ಸದಸ್ಯತ್ವದ ಅಭಿಯಾನ ಕಾರ್ಯ ಹೆಚ್ಚಿಸಬೇಕು. ತಂತ್ರಜ್ಞಾನ ಬಳಸಿ ಜನಸಂಪರ್ಕ ಹೆಚ್ಚಿಸಬೇಕು. ಕಾರ್ಯಕರ್ತರ ಶ್ರಮ ದಿಂದ ಪಕ್ಷದ ಅಭಿವೃದ್ಧಿ ಸಾಧ್ಯವಿದೆ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಸಜ್ಜನ ಮಾತನಾಡಿ, ಸರ್ಕಾರದ ಹಣದಲ್ಲಿ ಕಾಂಗ್ರೆಸ್ ಸಮಾವೇಶಗಳು ನಡೆಯುತ್ತಿವೆ. ಈ ವರೆಗೆ ಅಭಿವೃದ್ಧಿ ಮಾಡದ ಕಾಂಗ್ರೆಸ್ ಅಡಿಗಲ್ಲು ಹಾಕಿ ಹೋಗುತ್ತಿದೆ. ನಂತರ ಬಿಜೆಪಿ ಕಾರ್ಯ ಪೂರ್ಣಗೊಳಿಸಲಿದೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ಮುಖಂಡ ಕಲ್ಯಾಣಕುಮಾರ ಶೆಟ್ಟರ್ ಮಾತನಾಡಿದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಪುರಸಭೆ ಸದಸ್ಯರು, ಮುಖಂಡರು ಇದ್ದರು. ಶಿವಾನಂದ ಮ್ಯಾಗೇರಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>