ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಸಮಾಜವನ್ನು ಒಡೆಯುವ ಯತ್ನ ಮಾಡಿಲ್ಲ. ಅದಕ್ಕಾಗಿ ಯಾವ ಸಚಿವರನ್ನೂ ನೇಮಿಸಿಲ್ಲ. ವೀರಶೈವ-ಲಿಂಗಾಯತ ಸಮಾಜದ ಮುಖಂಡರು ಒಟ್ಟಾಗಿ ಬನ್ನಿ ಎಂದು ಕರೆದಿದ್ದೆ. ಅವರು ಬಂದಿಲ್ಲ. ಬರುವುದೂ ಇಲ್ಲ. ನೀವೇ (ಪತ್ರಕರ್ತರು) ಅವರನ್ನು ಒಟ್ಟಾಗಿ ಕರೆದುಕೊಂಡು ಬನ್ನಿ ಎಂದರು.