ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ,‘3ನೇ ಕನ್ನಡ ಸಾಹಿತ್ಯ ಸಮ್ಮೇಳನ ಸುರಪುರದಲ್ಲಿ ಅದ್ಧೂರಿಯಾಗಿ ಈಚೆಗೆ ನಡೆಯಿತು. ಈಗ 4ನೇ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ ನಡೆಸಲು ಉದ್ದೇಶಿಸಲಾಗಿದೆ. ಈ ಕುರಿತು ಸಾಹಿತ್ಯಾಸಕ್ತರು, ಸಾಹಿತಿಗಳು ಸಮ್ಮೇಳನ ನಡೆಸುವಂತೆ ಪರಿಷತ್ಗೆ ಮನವಿ ಕೂಡ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 4ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ’ ಎಂದು ವಿವರಿಸಿದರು.