ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌.ಕೆ.ನಗರ ಉಪಚುನಾವಣೆ: ವೇತನ ಸಹಿತ ರಜೆ ನೀಡಲು ಕಂಪೆನಿಗಳಿಗೆ ಮನವಿ

Last Updated 14 ಡಿಸೆಂಬರ್ 2017, 11:48 IST
ಅಕ್ಷರ ಗಾತ್ರ

ಚೆನ್ನೈ: ಆರ್‌.ಕೆ ನಗರ ಕ್ಷೇತ್ರದ ಉಪಚುನಾವಣೆ ಪ್ರಯುಕ್ತ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡುವಂತೆ ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದ ಉದ್ಯಮ ವಲಯಕ್ಕೆ ಕಾರ್ಮಿಕ ಇಲಾಖೆ ಮನವಿ ಮಾಡಿದೆ.

‘ಆರ್‌.ಕೆ ನಗರ ಕ್ಷೇತ್ರವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗೀ ಸಹಭಾಗಿತ್ವದ ಕೈಗಾರಿಕೆ ಹಾಗೂ ವಾಣಿಜ್ಯ ಉದ್ಯಮ ಸಂಸ್ಥೆಗಳು ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸುವಂತೆ ಮನವಿ ಮಾಡುತ್ತಿದ್ದೇವೆ’ ಎಂದು ಕಾರ್ಮಿಕ ಇಲಾಖೆ ಆಯುಕ್ತ ಕ.ಬಾಲಚಂದ್ರನ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನದಿಂದಾಗಿ ತೆರವಾಗಿರುವ ವಿಧಾನಸಭೆಯ ಸ್ಥಾನಕ್ಕೆ ಡಿಸೆಂಬರ್‌ 21ರಂದು ಉಪಚುನಾವಣೆ ನಡೆಯಲಿದ್ದು, ಎಐಡಿಎಂಕೆ ಪಕ್ಷದ ಹಿರಿಯ ನಾಯಕ ಇ. ಮಧುಸೂಧನನ್‌, ಡಿಎಂಕೆಯ ಎನ್‌.ಮರುಧು ಗಣೇಶ್‌ ನಡುವೆ ಹೆಚ್ಚಿನ ಪೈಪೋಟಿ ಕಂಡು ಬಂದಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT