ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ವರಿಗೂ ಸೂರು’ ಸರ್ಕಾರದ ಆದ್ಯತೆ’

Last Updated 15 ಡಿಸೆಂಬರ್ 2017, 5:31 IST
ಅಕ್ಷರ ಗಾತ್ರ

ಬಂಟ್ವಾಳ: ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಬಸವ ವಸತಿ ಯೋಜನೆ, ರಾಜೀವ್‌ ಗಾಂಧಿ ವಸತಿ ನಿಗಮ ಇತರ ಯೋಜನೆಯಡಿ ಜನತೆಗೆ ನಿವೇಶನ ಜೊತೆಗೆ ಸರ್ಕಾರವು ವಸತಿ ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಂಟ್ವಾಳ ಪುರಸಭೆಯಲ್ಲಿ ರಾಜೀವ ಗಾಂಧಿ ವಸತಿ ನಿಗಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಸತಿ ಮಂಜೂರಾತಿ ಪತ್ರವನ್ನು ಗುರುವಾರ ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 60 ವರ್ಷಗಳ ಹಿಂದೆ ನಿವೇಶನರಹಿತ ಕುಟುಂಬಗಳ ಸಂಖ್ಯೆ ಗರಿಷ್ಠ ಪ್ರಮಾಣದಲ್ಲಿದ್ದವು. ಸರ್ಕಾರದ ವಿವಿಧ ಯೋಜನೆಗಳಿಂದ ಹಾಗೂ ಸಾಮಾಜಿಕ ಬದಲಾವಣೆ ಮೂಲಕ ಹಂತ ಹಂತವಾಗಿ ಕಡಿಮೆಯಾಗುತ್ತಾ ಬಂದವು ಎಂದರು.

ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿನ ಪುರಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರು ₹10 ಕೋಟಿಗೂ ಹೆಚ್ಚು ಅನುದಾನ ಒದಗಿಸಿದ್ದಾರೆ ಎಂದರು.

ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಪ್ರಾಸ್ತಾವಿಕ ಮತನಾಡಿ, ರಾಜೀವಗಾಂಧಿ ವಸತಿ ಯೋಜನೆಯಡಿ ವಸತಿ ಮಂಜೂರಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ₹1.20ಲಕ್ಷ ಮತ್ತು ಕೇಂದ್ರದಿಂದ ₹ 1.50ಲಕ್ಷ ಹೀಗೆ ಒಟ್ಟು ₹ 2.70ಲಕ್ಷ ವೆಚ್ಚದಲ್ಲಿ ಒಟ್ಟು 700 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಿಸಲು ನಾಲ್ಕು ಹಂತದಲ್ಲಿ ಸಹಾಯಧನ ಬಿಡುಗಡೆಯಾಗುತ್ತದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ಸಮುದಾಯ ಅಭಿವೃದ್ಧಿ ಅಧಿಕಾರಿ ಮತ್ತಡಿ, ಮೇಲ್ವಿಚಾರಕಿ ಉಮಾವತಿ, ಪುರಸಭಾ ಸದಸ್ಯರಾದ ಗಂಗಾಧರ ಪೂಜಾರಿ, ಜಗದೀಶ ಕುಂದರ್, ಪ್ರವೀಣ ಬಿ., ಮಹಮ್ಮದ್ ಶರೀಫ್, ನಾರ್ಬರ್ಟ್ ಡಿಸೋಜ, ವಸಂತಿ ಚಂದಪ್ಪ, ಜೆಸಿಂತಾ ಡಿಸೋಜ ಮತ್ತು ಆಶ್ರಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT