<p><strong>ನವದೆಹಲಿ: </strong>ತ್ರಿವಳಿ ತಲಾಖ್ ನಿಷೇಧ ಮಸೂದೆಗೆ ಕೇಂದ್ರದ ಸಚಿವ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದ್ದು, ಮಸೂದೆಯನ್ನು ಶುಕ್ರವಾರದಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು.</p>.<p>ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತ್ರಿವಳಿ ತಲಾಖ್ ನಿಷೇಧ ಮಸೂದೆಗೆ ಒಪ್ಪಿಗೆ ನೀಡಲಾಯಿತು.</p>.<p>ಮುಸ್ಲಿಂ ಪುರುಷರು ಮೂರು ಬಾರಿ ತಲಾಖ್ (ತ್ರಿವಳಿ ತಲಾಖ್) ಹೇಳುವ ಮೂಲಕ ಪತ್ನಿಗೆ ವಿಚ್ಛೇದನ ನೀಡುವುದನ್ನು ಅಪರಾಧ ಎಂದು ಈ ಮಸೂದೆಯಲ್ಲಿ ಪರಿಗಣಿಸಲಾಗಿದೆ.</p>.<p>ಕಳೆದ ಆಗಸ್ಟ್ 22ರಂದು ಸುಪ್ರೀಂ ಕೋರ್ಟ್ ‘ತ್ರಿವಳಿ ತಲಾಖ್’ ಅಸಂವಿಧಾನಿಕ ಎಂದು ಹೇಳುವ ಮೂಲಕ ಈ ಪದ್ಧತಿಯನ್ನು ರದ್ದುಪಡಿಸಿತ್ತು. ಈ ಸಂಬಂಧ ಶಾಸನ ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.</p>.<p>ಕೇಂದ್ರದ ಕಾನೂನು ಇಲಾಖೆ ‘ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆ’ಯನ್ನು ಸಿದ್ಧಪಡಿಸಿತ್ತು. ಕಳೆದ ತಿಂಗಳು ತ್ರಿವಳಿ ತಲಾಖ್ ನಿಷೇಧ ಕರಡು ಮಸೂದೆಯನ್ನು ಎಲ್ಲಾ ರಾಜ್ಯ ಸರ್ಕಾರಗಳಿಗೆ ರವಾನಿಸಿದ್ದ ಕೇಂದ್ರ ಸರ್ಕಾರ ಅಭಿಪ್ರಾಯ ತಿಳಿಸುವಂತೆ ಕೋರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ತ್ರಿವಳಿ ತಲಾಖ್ ನಿಷೇಧ ಮಸೂದೆಗೆ ಕೇಂದ್ರದ ಸಚಿವ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದ್ದು, ಮಸೂದೆಯನ್ನು ಶುಕ್ರವಾರದಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು.</p>.<p>ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತ್ರಿವಳಿ ತಲಾಖ್ ನಿಷೇಧ ಮಸೂದೆಗೆ ಒಪ್ಪಿಗೆ ನೀಡಲಾಯಿತು.</p>.<p>ಮುಸ್ಲಿಂ ಪುರುಷರು ಮೂರು ಬಾರಿ ತಲಾಖ್ (ತ್ರಿವಳಿ ತಲಾಖ್) ಹೇಳುವ ಮೂಲಕ ಪತ್ನಿಗೆ ವಿಚ್ಛೇದನ ನೀಡುವುದನ್ನು ಅಪರಾಧ ಎಂದು ಈ ಮಸೂದೆಯಲ್ಲಿ ಪರಿಗಣಿಸಲಾಗಿದೆ.</p>.<p>ಕಳೆದ ಆಗಸ್ಟ್ 22ರಂದು ಸುಪ್ರೀಂ ಕೋರ್ಟ್ ‘ತ್ರಿವಳಿ ತಲಾಖ್’ ಅಸಂವಿಧಾನಿಕ ಎಂದು ಹೇಳುವ ಮೂಲಕ ಈ ಪದ್ಧತಿಯನ್ನು ರದ್ದುಪಡಿಸಿತ್ತು. ಈ ಸಂಬಂಧ ಶಾಸನ ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.</p>.<p>ಕೇಂದ್ರದ ಕಾನೂನು ಇಲಾಖೆ ‘ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆ’ಯನ್ನು ಸಿದ್ಧಪಡಿಸಿತ್ತು. ಕಳೆದ ತಿಂಗಳು ತ್ರಿವಳಿ ತಲಾಖ್ ನಿಷೇಧ ಕರಡು ಮಸೂದೆಯನ್ನು ಎಲ್ಲಾ ರಾಜ್ಯ ಸರ್ಕಾರಗಳಿಗೆ ರವಾನಿಸಿದ್ದ ಕೇಂದ್ರ ಸರ್ಕಾರ ಅಭಿಪ್ರಾಯ ತಿಳಿಸುವಂತೆ ಕೋರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>