ಇದೇ ಸಂದರ್ಭದಲ್ಲಿ ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮಾತನಾಡಿ, ‘ಮೂವತ್ತು ವರ್ಷದಿಂದ ರಾಜ್ಯದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಕನ್ಯಾಕುಮಾರಿಯಿಂದ ಗೋವಾ ತನಕ ಪಾದಯಾತ್ರೆ ನಡೆಸಿದ್ದು, ಸಂಘ– ಸಂಸ್ಥೆಗಳ ಪ್ರಮುಖರು, ಧಾರ್ಮಿಕ ಮುಖಂಡರು ಭಾಗಿ
ಯಾಗಿದ್ದರು. ಕರ್ನಾಟಕದಲ್ಲಿ ಹಲವು ಸಂಘಟನೆಗಳು ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿವೆ. ಪಶ್ಚಿಮ ಘಟ್ಟದಲ್ಲಿ ಬೇಡ್ತಿಯಿಂದ ಬರಪೊಳೆ, ತಗಡಿಯಿಂದ ಬೇಡ್ತಿವರೆಗಿನ ನದಿ ಕಣಿವೆ ಉಳಿಸುವ ಹೋರಾಟ ನಡೆಸಲಾಗಿದೆ. ತಲಕಾವೇರಿಯಿಂದ ಭಾಗಮಂಡಲದವರೆಗೆ ಪಶ್ಚಿಮಘಟ್ಟ ಉಳಿಸಿ ಪಾದಯಾತ್ರೆ ನಡೆದಿದ್ದು, ಮುಂದೆ ಐದು ಜಿಲ್ಲೆಗಳಲ್ಲಿ ಎರಡು ತಿಂಗಳು ಶಿಬಿರ ನಡೆಯಲಿದೆ’ ಎಂದರು.