ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಸ್ಥರ ಗೋಳು ಕೇಳುವವರಿಲ್ಲ

Last Updated 16 ಡಿಸೆಂಬರ್ 2017, 9:07 IST
ಅಕ್ಷರ ಗಾತ್ರ

ಚೇಳೂರು: ಪಾತಪಾಳ್ಯ ಹೋಬಳಿಯ ಸೋಮನಾಥಪುರ ಗ್ರಾಮದ ಮುಖ್ಯ ರಸ್ತೆಯ ಚರಂಡಿದ್ದು ಕೊಳಚೆ ನೀರು ರಸ್ತೆಗೆ ಹರಿಯುತ್ತಿದೆ. ಪಾದಚಾರಿಗಳಿಗೆ, ವಾಹನ ಸವಾರರಿಗೆ ತೊಂದರೆಯಾಗಿದೆ. ಇಲ್ಲಿಯೇ ಹಾಲಿನ ಡೇರಿ ಇದ್ದು ಬೆಳಿಗ್ಗೆ, ಸಂಜೆ ಡೇರಿಗೆ ಬರುವವರು ತ್ಯಾಜ್ಯದ ನೀರಿನ ಮೇಲೆಯೇ ನಡೆಯಬೇಕಾಗಿದೆ.

ಗ್ರಾಮದ ಚರಂಡಿಗಳಲ್ಲಿ ಹೂಳು ತುಂಬಿದೆ. ಕೊಳಚೆ ನೀರು ಸರಾಗವಾಗಿ ಹರಿಯದೆ ರಸ್ತೆಗೆ ಬರುತ್ತಿದೆ. ಸೊಳ್ಳೆಗಳ ಕಾಟ ಮೀತಿ ಮೀರಿದೆ. ಮೂಗು ಮುಚ್ಚಿ ಓಡಾಡುವ ಸ್ಥಿತಿ ಇದೆ. ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ ಗ್ರಾಮಸ್ಥರು ಇದ್ದಾರೆ. ಇಷ್ಟಾದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಜಾಣ ಕುರುಡರಾಗಿದ್ದಾರೆ ಎಂದು ಗ್ರಾಮದ ವಿಶ್ವನಾಥ್ ಆರೋಪಿಸಿದರು.

ಬಸ್‌ ನಿಲ್ದಾಣದಲ್ಲಿ ರಾಶಿ ಗಟ್ಟಲೇ ತ್ಯಾಜ್ಯ ಸುರಿಯುತ್ತಿದ್ದು ನಿಲ್ದಾಣ ದುರ್ನಾತ ಬೀರುತ್ತಿದೆ. ಮೂಲ ಸೌಲಭ್ಯಗಳ ಕೊರತೆ ಹೆಚ್ಚಿದೆ ಎಂದು ದೂರಿದರು. ರಸ್ತೆ ಬದಿಯಲ್ಲೇ ವರ್ತಕರು ತ್ಯಾಜ್ಯ ಸುರಿಯುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಂಜುನಾಥ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT