ಒಖಿ ಚಂಡಮಾರುತದಿಂದ ಹಾನಿಗೀಡಾಗಿರುವ ಪ್ರದೇಶಗಳಲ್ಲಿ ಮಂಗಳವಾರ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ, ಸೋಮವಾರ ರಾತ್ರಿಯೇ ಮಂಗಳೂರು ತಲುಪುವರು. ರಾತ್ರಿ ಸರ್ಕೀಟ್ ಹೌಸ್ನಲ್ಲಿ ತಂಗಲಿದ್ದು, ಮಂಗಳವಾರ ಬೆಳಿಗ್ಗೆಯೇ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಲಕ್ಷದ್ವೀಪಕ್ಕೆ ತೆರಳುವರು.