ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲ’

Last Updated 18 ಡಿಸೆಂಬರ್ 2017, 4:40 IST
ಅಕ್ಷರ ಗಾತ್ರ

ಮಂಡ್ಯ: ‘ಕಾಂಗ್ರೆಸ್‌ ಸರ್ಕಾರದ ಆಡಳಿತದಿಂದ ಬೇಸರಗೊಂಡಿರುವ ಜನರು ಬಿಜೆಪಿ ಕಡೆ ಮುಖ ಮಾಡಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಉಸ್ತುವಾರಿ ತೇಜಸ್ವಿನಿಗೌಡ ಹೇಳಿದರು. ನಗರದ ವಿಜಯಲಕ್ಷ್ಮಿ ಸಮುದಾಯ ಭವನದಲ್ಲಿ ಬಿಜೆಪಿ ಅಭಿವೃದ್ಧಿ ಪ್ರಕೋಷ್ಠ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಬದಲಾವಣೆಗಾಗಿ ಜನರು ಕಾಯುತ್ತಿದ್ದಾರೆ. ಜಿಲ್ಲೆಯ ಜನರ ನಿರೀಕ್ಷೆಗಳನ್ನು ಪೂರ್ಣಗೊಳಿಸಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಕಾಂಗ್ರೆಸ್ ಹಲವು ವರ್ಷಗಳೇ ಆಡಳಿತ ನಡೆಸಿಕೊಂಡು ಬಂದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ.

ರೈತರ ಆತ್ಮಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಅದನ್ನು ತಡೆಯುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗಲು ಹಾಗು ರೈತರ ಕಷ್ಟಗಳು ದೂರಾಗಬೇಕಾದರೆ ಅದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಬೇಕು’ ಎಂದು ಹೇಳಿದರು.

‘ಕೇಂದ್ರದಲ್ಲಿ ನರೇಂದ್ರಮೋದಿ ಅವರು ಜನಪರ ಆಡಳಿತ ನೀಡುತ್ತಿದ್ದಾರೆ. ದೇಶದ ಜನತೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರೈತರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದು ಹೇಳಿದರು.

ಜಿಲ್ಲಾ ಘಟಕದ ಅಧ್ಯಕ್ಷ ಕೆ.ನಾಗಣ್ಣಗೌಡ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್‌, ಅಭಿವೃದ್ಧಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ.ಸದಾನಂದ, ನಗರ ಘಟಕ ಅಧ್ಯಕ್ಷ ಎಚ್.ಆರ್.ಅರವಿಂದ್, ಎಸ್.ಸಿ.ಮಧುಚಂದನ್, ಸುಜಾತಾ, ಪುಟ್ಟಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT