ಚರಂಡಿ ಕಾಮಗಾರಿ ಆರಂಭಿಸಿ ಎರಡು ತಿಂಗಳು ಕಳೆದಿದ್ದು, ಗ್ರಾಮದ ನಿವಾಸಿ ಲೋಕೇಶ್ ಎಂಬುವವರು ರಸ್ತೆಯನ್ನೇ ಅತಿಕ್ರಮಿಸಿಕೊಂಡಿದ್ದೇ ಕಾಮಗಾರಿಗೆ ಅಡಚಣೆಯಾಗಿದೆ. ಈ ಸಂಬಂಧ ಪಂಚಾಯಿತಿ ಅಧಿಕಾರಿ ಒತ್ತುವರಿ ತೆರವುಗೊಳಿಸಲು ಹಿಂದೇಟು ಹಾಕುತ್ತಿದ್ದು ಕಾಮಗಾರಿ ಸ್ಥಗಿತಗೊಂಡಿದೆ ಎಂದು ಗ್ರಾಮದ ವಾಸುದೇವ್ ಆರೋಪಿಸಿದ್ದಾರೆ.