ಆರ್ಟಿಇ ಕಾಯ್ದೆಯನ್ನು ಖಾಸಗಿ ಶಾಲೆಗಳ ಸಾಮಾಜಿಕ ಹೊಣೆಗಾರಿಕೆ ಕಾಯ್ದೆ ಎಂದು ತಿದ್ದುಪಡಿ ಮಾಡಿ ಖಾಸಗಿ ಶಾಲೆಗಳಲ್ಲಿ ಹಿಂದುಳಿದ ಬಡವರ್ಗದ ಮಕ್ಕಳಿಗೆ ಅವರ ವಾರ್ಷಿಕ ಪ್ರವೇಶಾವಕಾಶಗಳ ಶೇ 25 ರಷ್ಟನ್ನು ಮೀಸಲಿಡಬೇಕು. ಜೊತೆಗೆ ಆರ್ಟಿಇ ಗೆ ಮೀಸಲಿರಿಸಿದ ನಿಧಿಯನ್ನು ಗ್ರಾಮೀಣ ಶಾಲಾ ಮಕ್ಕಳ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕೋರಿದರು. ವೇದಿಕೆ ಸಂಚಾಲಕರಾದ ನಾಗರತ್ನ ಬಂಜಗೆರೆ, ಶೋಭಾ, ಮಮತಾ, ಶಕುಂತಲಾ, ರಜನಿ, ಮಂಗಳಾ ಇದ್ದರು.