ಭಾಲ್ಕಿ: ‘ರೈತರ, ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಜೆಡಿಎಸ್ ಅಭಿವೃದ್ಧಿ ಪರ ಪಕ್ಷವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಜನರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡಲಿದ್ದಾರೆ’ ಎಂದು ಜೆಡಿಎಸ್ ಮುಖಂಡ ಜನಾರ್ಧನ ಬಿರಾದರ ನುಡಿದರು.
ಪಟ್ಟಣದಲ್ಲಿ ಈಚೆಗೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬ ನಿಮಿತ್ತ ರೋಗಿಗಳಿಗೆ ಹಣ್ಣು, ಹಾಲು, ಬ್ರೇಡ್ ವಿತರಿಸಿ ಮಾತನಾಡಿದರು.