ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಬಿಜೆಪಿ ಪರಿವರ್ತನಾ ಯಾತ್ರೆ ಖಂಡಿಸಿ ಪ್ರತಿಭಟನೆ

Last Updated 21 ಡಿಸೆಂಬರ್ 2017, 8:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬಿಜೆಪಿ ಪರಿವರ್ತನಾ ಯಾತ್ರೆ ಖಂಡಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರದ ಕೋರ್ಟ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ಮಾಡಿ ಕಪ್ಪು ಬಟ್ಟೆ ಪ್ರದರ್ಶಿಸಿದರು.

ಚುನಾವಣೆ ಸಮೀಪಿಸುತ್ತಿರುವುದರಿಂದ ಮಹದಾಯಿ ವಿಚಾರವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ದೂರಿದರು.

ಡಿ.15ರ ಒಳಗೆ ಮಹದಾಯಿ ಸಮಸ್ಯೆ ಬಗೆಹರಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಮಾತು ತಪ್ಪಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಂಜೆ ಸಭೆ

ಬಿಜೆಪಿಯ ಪರಿವರ್ತನಾ ಯಾತ್ರೆ‌ ನಗರದ ನೆಹರೂ ಮೈದಾನದಲ್ಲಿ ಇಂದು ಸಂಜೆ 5ಕ್ಕೆ ಬೃಹತ್ ಸಭೆ‌ ನಡೆಯಲಿದೆ. ಉತ್ತರ ‌ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮುಖ್ಯ ಭಾಷಣ‌ ಮಾಡುವರು.

ಸಭೆಯ ಅಂಗವಾಗಿ ಸ್ಟೇಶನ್ ರಸ್ತೆಯಿಂದ ಮೈದಾನದ‌ ಬಳಿ ಹಾಯ್ದು ‌ಕಿತ್ತೂರು ಚನ್ನಮ್ಮ ವೃತ್ತ ಸಂಪರ್ಕಿಸುವ ರಸ್ತೆಯನ್ನು ಪೊಲೀಸರು ಬಂದ್ ಮಾಡಿದ್ದು, ಪರ್ಯಾಯ ‌ಮಾರ್ಗದ‌ ಮೂಲಕ ‌ವಾಹನಗಳು ತೆರಳುತ್ತಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT