ಶಿವಮೊಗ್ಗ: ಕ್ವಿಂಟಲ್ಗೆ ₹ 2,300 ಬೆಂಬಲ ಬೆಲೆ ನೀಡಿ ರೈತರು ಮಾರುವ ರಾಗಿಯನ್ನು ಖರೀದಿಸಿ, ಪಡಿತರ ವ್ಯವಸ್ಥೆಯಲ್ಲಿ ಉಚಿತವಾಗಿ ವಿತರಿಸಲಾಗುವುದು. ಇದೇ ರೀತಿ ಬಿಳಿ ಜೋಳಕ್ಕೆ ಮಾರುಕಟ್ಟೆಯಲ್ಲಿ ದರ ಕಡಿಮೆಯಾದರೆ ಅದನ್ನೂ ರೈತರಿಂದ ಖರೀದಿಸಿ ಪಡಿತರ ಮೂಲಕ ವಿತರಿಸಲು ಯೋಚಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.