ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರಿ ರಸ್ತೆಗೆ ತಡೆಗೋಡೆ ನಿರ್ಮಿಸಲು ಒತ್ತಾಯ

Last Updated 22 ಡಿಸೆಂಬರ್ 2017, 6:15 IST
ಅಕ್ಷರ ಗಾತ್ರ

ವಿಜಯಪುರ: ಚಿಕ್ಕಬಳ್ಳಾಪುರದ ಕಡೆಗೆ ಸಂಚರಿಸುವ ಮುಖ್ಯರಸ್ತೆಯಲ್ಲಿರುವ ಅಮಾನಿಕೆರೆಯ ಏರಿಯ ಮೇಲಿನ ಇಕ್ಕೆಲುಗಳಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದ್ದಾರೆ.

ಇಲ್ಲಿಂದ ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡುವ ಮುಖ್ಯ ರಸ್ತೆಯಲ್ಲಿರುವ ಅಮಾನಿಕರೆಯ ಏರಿಯ ಇಕ್ಕೆಲುಗಳಲ್ಲಿ ತಡೆಗೋಡೆಗಳನ್ನು ನಿರ್ಮಾಣ ಮಾಡಬೇಕು ಎಂದು ಅನೇಕ ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಯಾವ ಇಲಾಖೆಯವರು ಗಮನಹರಿಸುತ್ತಿಲ್ಲ ಎಂದು ನಾಗರಿಕರು ಬೇಸರ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ‘ರಸ್ತೆ ಬದಿ ತಡೆಗೋಡೆ ನಿರ್ಮಾಣಕ್ಕೆ ಮನವಿ’ ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಸಾರ ಮಾಡಲಾಗಿತ್ತು.

ರಸ್ತೆಯ ಇಕ್ಕೆಲುಗಳಲ್ಲಿ ಬೆಳೆದಿದ್ದ ದಟ್ಟವಾದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿರುವುದರಿಂದ ವಾಹನ ಸವಾರರಿಗೆ ಕೊಂಚಮಟ್ಟಿಗೆ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT