ಇಲ್ಲಿಂದ ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡುವ ಮುಖ್ಯ ರಸ್ತೆಯಲ್ಲಿರುವ ಅಮಾನಿಕರೆಯ ಏರಿಯ ಇಕ್ಕೆಲುಗಳಲ್ಲಿ ತಡೆಗೋಡೆಗಳನ್ನು ನಿರ್ಮಾಣ ಮಾಡಬೇಕು ಎಂದು ಅನೇಕ ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಯಾವ ಇಲಾಖೆಯವರು ಗಮನಹರಿಸುತ್ತಿಲ್ಲ ಎಂದು ನಾಗರಿಕರು ಬೇಸರ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ‘ರಸ್ತೆ ಬದಿ ತಡೆಗೋಡೆ ನಿರ್ಮಾಣಕ್ಕೆ ಮನವಿ’ ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಸಾರ ಮಾಡಲಾಗಿತ್ತು.