ಈ ನೀರು ಹೋಗಲು ಜಾಗವಿಲ್ಲದೆ ರಸ್ತೆ ಸಂಚಾರ ಅಸ್ತವ್ಯಸ್ತವಾದರೆ, ಮೆಸ್ಕಾಂ ಕಚೇರಿಯೊಳಗೆ ಹೋಗಲೂ ಸಾದ್ಯವಾಗುತ್ತಿರಲಿಲ್ಲ. ದ್ವಿಚಕ್ರ ವಾಹನ ಸವಾರರು ಬೀಳುವುದು ಮಾಮೂಲಿಯಾಗಿತ್ತು. ಪ್ರತಿ ಮಳೆಗಾಲದಲ್ಲಿ ಜನರು ಹಿಡಿಶಾಪ ಹಾಕುವುದು ಏಳೆಂಟು ವರ್ಷಗಳಿಂದ ಮಾಮೂಲಿಯಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಹ ಇದರತ್ತ ಗಮನ ಹರಿಸದಿರುವುದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು.