ಹಿರೀಸಾವೆ: ತಾಲ್ಲೂಕು ಬಿಜೆಪಿ ಕಾರ್ಯಕರ್ತರ ನಡುವೆ ಇರುವ ಅಸಮಾಧಾನ ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣ ಅವರ ಮುಂದೆ ಗುರುವಾರ ಬಹಿರಂಗವಾಯಿತು. ಬಿಜೆಪಿ ಜಿಲ್ಲಾ ಉಸ್ತುವಾರಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಗುರುವಾರ ಸೋಮಣ್ಣ ಜಿಲ್ಲೆಗೆ ಬಂದಿದ್ದರು. ತಾಲ್ಲೂಕು ಘಟಕದ ಅಧ್ಯಕ್ಷ ಶಿವನಂಜೇಗೌಡರ ನೇತೃತ್ವದಲ್ಲಿ ಕೆಲ ಕಾರ್ಯಕರ್ತರು ಹಾಸನ ಜಿಲ್ಲಾ ಗಡಿಭಾಗವಾದ ಕಿರೀಸಾವೆಯಲ್ಲಿ ಸ್ವಾಗತಿಸಿದರೆ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬೂಕದ ಶಿವಣ್ಣ ನೇತೃತ್ವದಲ್ಲಿ ಕೆಲ ಕಾರ್ಯಕರ್ತರು ಹಿರೀಸಾವೆ ಶ್ರೀಕಂಠಯ್ಯ ವೃತ್ತದಲ್ಲಿ ಪ್ರತ್ಯೇಕವಾಗಿ ಸ್ವಾಗತಿಸಿದರು.