‘ಸಾರ್ವಜನಿಕರು ಕಾಮಗಾರಿ ಹಂತದಲ್ಲಿ ಪ್ರತಿನಿತ್ಯ ಗುಣಮಟ್ಟ ಗಮನಿಸುತ್ತಿರಬೇಕು. ಕಳಪೆ ಕಂಡು ಬಂದಲ್ಲಿ ನೇರವಾಗಿ ನನ್ನ ಗಮನಕ್ಕೆ ತನ್ನಿ’ ಎಂದು ಸೂಚಿಸಿದರು. ಹಾಡವಳ್ಳಿ ಪಂಚಾಯ್ತಿ ಅಧ್ಯಕ್ಷ ಶ್ರೀಧರ ಶೆಟ್ಟಿ ಸಚಿವರನ್ನು ಸನ್ಮಾನಿಸಿ, ಅತಿಕ್ರಮಣದಾರರ ಪರವಾಗಿ ಮನವಿ ನೀಡಿದರು. ಸಾಗರ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ತಾಳಗುಪ್ಪ ಜಿಲ್ಲಾಪಂಚಾಯ್ತಿ ಸದಸ್ಯ ರಾಜಶೇಖರ ಗಾಳಿಪುರ, ಚನ್ನಗೊಂಡ ಪಂಚಾಯ್ತಿ ಅಧ್ಯಕ್ಷೆ ಆರತಿ ಉದಯಕುಮಾರ, ಉಪಾಧ್ಯಕ್ಷ ವಿಜಯಕುಮಾರ ಹಾಜರಿದ್ದರು.