ಬಂಗಾರಪೇಟೆ: 'ಮಾನವನ ಹಕ್ಕು, ಮಾನ ಪ್ರಾಣ, ಆಸ್ತಿ ರಕ್ಷಣೆಗೆ ಕಾನೂನು ಬಲಗೊಂಡಿದೆ' ಎಂದು ಪಟ್ಟಣದ ಅಪರ ಸಿವಿಲ್ ನ್ಯಾಯಾಧೀಶ ಎ.ಸಿ.ದಯಾನಂದಮೂರ್ತಿ ಹೇಳಿದರು. ಬಂಗಾರಪೇಟೆ ತಾಲ್ಲೂಕು ಕಾನೂನು ಸೇವಾ ಸಮಿತಿ, ಕೆಜಿಎಫ್ ವಕೀಲರ ಸಂಘ, ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.