ನಟ ರವಿಶಂಕರ್ ಅವರು, ಅವಹೇಳನಕಾರಿಯಾಗಿ ಮತ್ತು ಅಶ್ಲೀಲವಾಗಿ ವಕೀಲ ಪಾತ್ರಧಾರಿಗೆ ಹೇಳಿರುವ ಸಂಭಾಷಣೆ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲ ವೃತ್ತಿಗೆ ಅವಮಾನ ಮಾಡಲಾಗಿದೆ. ಹೀಗಾಗಿ, ಅದನ್ನು ಚಲನಚಿತ್ರದಿಂದ ತೆಗೆದುಹಾಕಬೇಕು. ಅಲ್ಲಿಯ ವರೆಗೆ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಕೋರಿ ವಕೀಲರಾದ ನಾರಾಯಣಸ್ವಾಮಿ, ವಿಜಯಕುಮಾರ್, ವಿನೋದ್ಕುಮಾರ್, ನಾಗೇಶ್, ನವೀನ್ಕುಮಾರ್ ಅವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದಾರೆ.