ನವೀಕರಣ ಕಾಮಗಾರಿ ಯಿಂದಾಗಿ 6 ತಿಂಗಳಿನಿಂದ ವೀಕ್ಷಣೆ ನಿರ್ಬಂಧಿಸಲಾಗಿತ್ತು. ಮಂದಿರದ ಬುದ್ಧ ಪ್ರತಿಮೆಗಳಿಗೆ ನೂತನ ಅಲಂಕಾರಿಕ ಕೆಲಸ ಮತ್ತು ಟೈಲ್ಸ್ ಕಾಮಗಾರಿ ನಡೆಯುತ್ತಿದ್ದರಿಂದ ಪ್ರವೇಶ ನೀಡುತ್ತಿರಲಿಲ್ಲ. ಈಗ ಕಾಮಗಾರಿ ಮುಗಿದಿದ್ದು, ಇನ್ನು ಮುಂದೆ ಪ್ರತಿದಿನ ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.